News Karnataka Kannada
Thursday, May 02 2024
ಶಿವಮೊಗ್ಗ

ಹಿಂದೂಗಳನ್ನು ವಿರೋಧಿಸಿದ್ದಕ್ಕೆ ಕಾಂಗ್ರೆಸ್ ಹಾಳಾಗಿದೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Shimogga Harsha Murder
Photo Credit :

ಶಿವಮೊಗ್ಗ:ಹಿಂದೂಗಳನ್ನು ವಿರೋಧಿಸಿದ್ದಕ್ಕೆ ಕಾಂಗ್ರೆಸ್ ಹಾಳಾಗಿದೆ.ಆದರೂ ಕಾಂಗ್ರೆಸ್ ಗೆ ಪಾಠ ಬಂದಿಲ್ಲ‌ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕೆ ಮಾಡಿದರು.

ಹತ್ಯೆಯಾದ ಹಿಂದೂ ಕಾರ್ಯಕರ್ತ ಹರ್ಷ ಮನೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಾಂತ್ವನ ಹೇಳಿದರು.ನಿಮ್ಮೊಂದಿಗೆ ಎಂದೆಂದಿಗೂ ನಾವಿರುತ್ತೇವೆ ಎಂದು ನಾಯಕರು ಅಭಯ ನೀಡಿದರು. ಇದೇ ವೇಳೆ ಹರ್ಷ ಕುಟುಂಬದವರಿಗೆ ಯತ್ನಾಳ್ ಸಿದ್ಧಸಿರಿ ಸೌಹಾರ್ದ ವತಿಯಿಂದ 5 ಲಕ್ಷ ರೂಪಾಯಿಯ ಚೆಕ್ ನೀಡಿದರು.

ಹಿಂದೂ ಕಾರ್ಯಕರ್ತ ಹರ್ಷನನ್ನು ದಾರುಣವಾಗಿ‌ ಕೊಲೆ ಮಾಡಿದ್ದಾರೆ. ಹಿಂದೂ ಯುವಕರ ಕೊಲೆಗೆ ಅಂತ್ಯ ಹಾಡಬೇಕಿದೆ. ಹರ್ಷನ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಿದ್ದಾರೆ. ಈ ಆರೋಪಿಗಳನ್ನು ಗಲ್ಲಿಗೇರಿಸಬೇಕು. ಇಲ್ಲದಿದ್ದಲ್ಲಿ ಹಿಂದೂಗಳ ರಕ್ಷಣೆ ಮಾಡಲು ಸಾಧ್ಯವಿಲ್ಲ ಎಂದು ಯತ್ನಾಳ್ ಹೇಳಿದರು.

ಹಿಂದೂ ಕಾರ್ಯಕರ್ತರ ಹತ್ಯೆ ಹಿಂದೆ ಅಂತಾರಾಷ್ಟ್ರೀಯ ಷಡ್ಯಂತ್ರ ಅಡಗಿದೆ. ಎಲ್ಲೆಲ್ಲಿ ಮುಸ್ಲಿಮರು ಹೆಚ್ಚಿದ್ದಾರೋ ಅಲ್ಲಿ ಹಿಂದೂಗಳು ಬದುಕುವುದೇ ಕಷ್ಟವಾಗಿದೆ. ಹಿಂದೂ ಯುವಕರ ಕೊಲೆ ಮಾಡಿದವರು ಖುಲಾಸೆಯಾಗುತಿದ್ದಾರೆ. ಅವರಿಗೆ ಶಿಕ್ಷೆಯಾಗಬೇಕು. ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣಗಳನ್ನು ಎನ್ ಐಎ ಗೆ ವಹಿಸಬೇಕು ಎಂದು ಆಗ್ರಹಿಸಿದರು.

ಹೆಣ್ಣುಮಕ್ಕಳನ್ನು ಮುಂದಿಟ್ಟುಕೊಂಡು ಮುಸ್ಲಿಂ ಯುವಕರು ದುಷ್ಕೃತ್ಯ ಎಸಗುತ್ತಿದ್ದಾರೆ. ಹಿಂದೆ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು ಹಿಜಾಬ್ ವಿಷಯದಲ್ಲಿ ಗಲಾಟೆ ಆರಂಭಿಸಿದರು‌. ಹರ್ಷನ ಹತ್ಯೆ ಪ್ರಕರಣದಲ್ಲಿಯೂ ಸಹ ಯುವತಿಯರನ್ನು ಮುಂದಿಟ್ಟುಕೊಂಡಿದ್ದು ದೃಢಪಟ್ಟಿದೆ‌. ಹಿಂದೂಗಳ ರಕ್ಷಣೆ, ದೇಶದ ರಕ್ಷಣೆ ನಮ್ಮ ಮೊದಲ ಕರ್ತವ್ಯ. ಹಿಂದೂಗಳ ಹಿಂದೆ ನಾವೆಂದೂ ಇರುತ್ತೇವೆ. ನಮಗೆ ಹಿಂದೂಗಳ ಸಮಾಧಿ ಮೇಲೆ ಅಧಿಕಾರ ನಡೆಸುವ ಅಗತ್ಯವಿಲ್ಲ‌. ಗೋಹತ್ಯೆ ನಿಷೇಧ, ಹಿಂದುತ್ವದ ರಕ್ಷಣೆಗಾಗಿ ಹೋರಾಟ ಮಾಡಿ ಮಡಿಯುವ ಪ್ರಸಂಗ ಹರ್ಷನ ಕೊಲೆಗೇ ಕೊನೆಯಾಗಬೇಕು ಎಂದು ಯತ್ನಾಳ್ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು