News Karnataka Kannada
Sunday, April 28 2024
ಶಿವಮೊಗ್ಗ

ಹೊಳೆಹೊನ್ನೂರು:ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರ ಸಿಬ್ಬಂದಿ ಗಳಿಂದ ಒಗ್ಗಟ್ಟು ಪ್ರದರ್ಶನ

New Project 2021 11 21t080103.827
Photo Credit :

ಹೊಳೆಹೊನ್ನೂರು:  ಹೊಳೆಹೊನ್ನೂರು ದಂತವೈದ್ಯ ಅಧಿಕಾರಿಗಳಾದ ಮೋಹನ್ ಅವರ ಮೇಲೆ ಆರೋಪಿಸಲಾಗಿರುವ ಸುಳ್ಳು ಆಪಾದನೆಯನ್ನು ಖಂಡಿಸಿ ಹಾಗೂ ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಿಬ್ಬಂದಿಗಳ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಐ ಪಿ ಶಾಂತರಾಜ್ ರವರ ಮುಂದಾಳತ್ವದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಬೃಹತ್ ಸಂಖ್ಯೆಯಲ್ಲಿ ಒಗ್ಗಟ್ಟು ಪ್ರದರ್ಶಿಸಿ ಮನವಿ ಪತ್ರವನ್ನು ಶಿವಮೊಗ್ಗ ಜಿಲ್ಲೆಯ ನೋಡಲ್ ಅಧಿಕಾರಿಗಳಾದ ಡಾಕ್ಟರ್ ಸೆಲ್ವಕುಮಾರ್ ಐ ಎ ಎಸ್ ಹಾಗು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ನಾಗೇಂದ್ರ ಎಫ್ ಹೊನ್ನಳ್ಳಿ ರವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷರಾದ ಡಾಕ್ಟರ್ ಸಿದ್ದನಗೌಡ.ಪಿ , ವೈದ್ಯಕೀಯ ಸಂಘದ ಕಾರ್ಯದರ್ಶಿಗಳಾದ ಡಾ. ನಾಗರಾಜ್ ನಾಯಕ್ ಹಾಗು ನೌಕರರ ಸಂಘದ ನಿರ್ದೇಶಕರಾದ ವೈ ಜೆ ಶಶಿಕುಮಾರ್, ಪ್ರಭಾಕರ,ಅಶೋಕ್, ಲಕ್ಷ್ಮಣ್ ಮತ್ತು ತಾಲೂಕ ಅಧ್ಯಕ್ಷರುಗಳು, ವಿವಿಧ ವೃತ್ತಿ ಸಂಘದ ಅಧ್ಯಕ್ಷರು,ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು