News Karnataka Kannada
Monday, May 06 2024
ಶಿವಮೊಗ್ಗ

ಹೊಸ ಪೀಳಿಗೆಯನ್ನು ರಂಗಭೂಮಿ ಕಡೆಗೆ ಸೆಳೆಯಬೇಕು: ಸಚಿವ ಸುನೀಲ್ ಕುಮಾರ್

Shivamogga (1)
Photo Credit :

ಶಿವಮೊಗ್ಗ : ಹೊಸ ಪೀಳಿಗೆಯನ್ನು ರಂಗಭೂಮಿಯ ಕಡೆಗೆ ಸೆಳೆಯುವ ಕಾರ್ಯವನ್ನು ರಂಗಾಯಣಗಳು ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಇಂಧನ ಖಾತೆ ಸಚಿವ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು.

ಅವರು ಶನಿವಾರ ಶಿವಮೊಗ್ಗ ರಂಗಾಯಣದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಮ್ಯೂರಲ್ ಆರ್ಟ್ ಗ್ಯಾಲರಿಯನ್ನು ಉದ್ಘಾಟಿಸಿ ಮಾತನಾಡಿದರು.

ಪೈಪೋಟಿಯ ಇಂದಿನ ಯುಗದಲ್ಲಿ ಯುವ ಜನರು ಸಾಮಾಜಿಕ ಜಾಲತಾಣಗಳಿಗೆ ಹೆಚ್ಚಾಗಿ ಮಾರು ಹೋಗುತ್ತಿದ್ದು, ಅಂತಹ ಯುವ ಜನರಲ್ಲಿ ರಂಗ ಆಸಕ್ತಿ ಮೂಡಿಸುವ ಕಾರ್ಯ ನಡೆಯಬೇಕು. ಅವರಲ್ಲಿರುವ ಪ್ರತಿಭೆಗಳಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಕಾರ್ಯವನ್ನು ರಂಗಾಯಣ ಮಾಡಬೇಕು.

ನಾಟಕ ಅಭಿವ್ಯಕ್ತಿಯ ಅತ್ಯುತ್ತಮ ಮಾಧ್ಯಮವಾಗಿದ್ದು, ಗಾಂಧೀಜಿಯವರು ಸತ್ಯ ಹರಿಶ್ಚಂದ್ರ ನಾಟಕದಿಂದ ಪ್ರಭಾವಿತರಾಗಿದ್ದರು. ಶಿವರಾಮ ಕಾರಂತ ಅವರ ಕಾದಂಬರಿ ಆಧರಿಸಿ ನಾಟಕ ರಚಿಸುವ ಶಿವಮೊಗ್ಗ ರಂಗಾಯಣದ ಪ್ರಸ್ತಾವನೆಯನ್ನು ಮನ್ನಿಸಿ ಮುಂದಿನ ಬಜೆಟ್‌ನಲ್ಲಿ ಅನುದಾನ ಒದಗಿಸಲಾಗುವುದು ಎಂದು ಸಚಿವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಸೋಲಾರ್ ಪ್ಯಾನೆಲ್‌ಗಳನ್ನು ಅಳವಡಿಸಿ, ವಿದ್ಯುತ್ ಸ್ವಾವಲಂಬನೆ ಸಾಧಿಸುವ ಪ್ರಸ್ತಾವನೆಯನ್ನು ಸಹ ಅನುಷ್ಟಾನಗೊಳಿಸಲು ಪ್ರಯತ್ನಿಸುವುದಾಗಿ ಸಚಿವರು ತಿಳಿಸಿದರು.

ಮ್ಯೂರಲ್ ಆರ್ಟ್ ಗ್ಯಾಲರಿ: ಶಿವಮೊಗ್ಗ ಸ್ಮಾರ್ಟ್ ಸಿಟಿ ಅನುದಾನದಲ್ಲಿ ಕರ್ನಾಟಕ ಚಿತ್ರ ಕಲಾ ಪರಿಷತ್ ಸಹಯೋಗದಲ್ಲಿ 40ಕ್ಕೂ ಅಧಿಕ ಮ್ಯೂರಲ್ ಕಲಾಕೃತಿಗಳನ್ನು ರಚಿಸಲಾಗಿದ್ದು, ಆಕರ್ಷಕವಾಗಿವೆ. ವಿವಿಧ ನಾಟಕಗಳ ದೃಶ್ಯಗಳು, ಸೂತ್ರದ ಗೊಂಬೆಯಾಟ, ವರ್ಲಿ ಪೈಂಟಿAಗ್ ಕಲಾಕೃತಿಗಳು, ಹತ್ತಾರು ಬಗೆಯ ಮುಖವಾಡಗಳು ಶಿವಮೊಗ್ಗ ರಂಗಾಯಣಕ್ಕೆ ಹೊಸ ರೂಪು ನೀಡಿವೆ. ಬೇರೆ ಯಾವುದೇ ರಂಗಾಯಣಗಳು ಮಾಡದ ಕಾರ್ಯವನ್ನು ಶಿವಮೊಗ್ಗ ರಂಗಾಯಣ ಮಾಡಿದೆ ಎಂದು ಸಚಿವರು ಈ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಆಡಳಿತಾಧಿಕಾರಿ ಶಫಿ ಸಾದುದ್ದೀನ್ ಧನ್ಯವಾದ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ದತ್ತಾತ್ರಿ, ರಂಗ ಸಮಾಜದ ಸದಸ್ಯ ಹಾಲಸ್ವಾಮಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು