ಶಿವಮೊಗ್ಗ: ಕಾರೊಂದು ಯದ್ವಾತದ್ವ ಚಲಿಸಿ 2 ಆಟೋ, ಒಂದು ಖಾಸಗಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭದ್ರಾವತಿಯ ಅಂಬೇಡ್ಕರ್ ಸರ್ಕಲ್ನ ಬಸ್ ನಿಲ್ದಾಣದ ಬಳಿ ರಾತ್ರಿ ನಡೆದಿದೆ.
ಅಪಘಾತದಲ್ಲಿ ಆಟೋ ಚಾಲಕ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ನಿಯಂತ್ರಣ ತಪ್ಪಿದ ಕಾರು ಅರಂಭದಲ್ಲೇ ಅಂಬೇಡ್ಕರ್ ಸರ್ಕಲ್ ಪ್ರತಿಮೆ ಬಳಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿಯಾಗಿತ್ತು. ಬಳಿಕ ಖಾಸಗಿ ಬಸ್ ಹಾಗೂ 2 ಆಟೋಗಳಿಗೆ ಭಯಾನಕವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಆಟೋ ಡ್ರೈವರ್ ಸೇರಿ ಇಬ್ಬರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಕಾರು ಡಿಕ್ಕಿಯಾಗಿದ್ದರಿಂದ ಒಂದು ಆಟೋ ಸಂಪೂರ್ಣ ಜಖಂ ಆಗಿದ್ದು ಇನ್ನೊಂದಕ್ಕೆ ಸ್ವಲ್ಪ ಹಾನಿಯಾಗಿದೆ. ಅದರಂತೆ ಬಸ್ನ ಮುಂಭಾಗವೂ ಹಾನಿಯಾಗಿದೆ.
ಕಾರು ಡ್ರೈವರ್ ಮದ್ಯ ಸೇವನೆ ಮಾಡಿ ಕಾರು ಚಲಾಯಿಸಿದ್ದರಿಂದ ಈ ಅಪಘಾತಗಳು ನಡೆದಿವೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಈ ಸಂಬಂಧ ಭದ್ರಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.