ಶಿವಮೊಗ್ಗ : ಕಾಂಗ್ರೆಸ್ ನವರು ಜನರಿಗೆ ಕೊಟ್ಟ ಭರವಸೆ ಈಡೇರಿಸಬೇಕು. ರಾಜ್ಯದಲ್ಲಿ ಈಗ ಬಡವರಿಗೆ ನೀಡುತ್ತಿರುವ 5 ಕೆಜಿ ಉಚಿತ ಅಕ್ಕಿ ಕೇಂದ್ರ ಸರ್ಕಾರದ್ದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಟ್ಟ ಭರವಸೆಯಂತೆ ಸಿಎಂ ಸಿದ್ದರಾಮಯ್ಯ ಅವರು ಬಡವರಿಗೆ ಉಚಿತವಾಗಿ 10 ಕೆಜಿ ಅಕ್ಕಿ ಕೊಡಬೇಕು.
ಪ್ರಧಾನಿ ಮೋದಿ ಅವರು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿರಲಿಲ್ಲ. ರಾಜ್ಯದಲ್ಲಿ ಈಗ ನೀಡುತ್ತಿರುವ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರದ್ದು , ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿನಾಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ. ಯಾವುದೇ ಗೊಂದಲ ಮಾಡದೇ ಬಡವರಿಗೆ ಉಚಿತ ಅಕ್ಕಿ ವಿತರಣೆ ಮಾಡಲಿ ಎಂದರು.