ಆಗುಂಬೆ ಘಾಟಿ: ಬಾರಿ ಗುಡ್ಡ ಕುಸಿತ, ಮಾರ್ಗ ಸಂಚಾರ ಅಸ್ತವ್ಯಸ್ತ

ಆಗುಂಬೆ: ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗೆ ಸೇರಿರುವ ಆಗುಂಬೆ ಘಾಟಿಯಲ್ಲಿ ಇಂದು ಮುಂಜಾನೆ ಗುಡ್ಡಕುಸಿದಿದೆ. ಗುಡ್ಡಕುಸಿತದಿಂದ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ಸೋಮೇಶ್ವರದಿಂದ ಬರುವ ನೂರನೇ ತಿರುವಿನಲ್ಲಿ ಇಂದು ಬೆಳ್ಳಂಬೆಳಿಗ್ಗೆನೇ ಗುಡ್ಡ ಕುಸಿತವಾಗಿದೆ. ಸಧ್ಯಕ್ಕೆ ರಸ್ತೆಯ ಮೇಲಿನ ಸಂಚಾರ ಅಸ್ತವ್ಯಸ್ತವಾಗಿದೆ.

ಆಗುಂಬೆಯಲ್ಲಿ ಸತತವಾಗಿ 8 ದಿನದಿಂದ ಭಾರಿ ಮಳೆಯಾಗುತ್ತಿದ್ದು ಇಂದು ಗುಡ್ಡಕುಸಿದಿದೆ. ಈ ಪ್ರದೇಶ ಉಡುಪಿ ಜಿಲ್ಲಾಡಳಿತಕ್ಕೆ ಸೇರಿದರೂ ಸಹ ಭಾನುವಾರವಾದುದರಿಂದ ಈ ರಸ್ತೆಯಲ್ಲಿ ಸಂಚರಿಸುವವರು ಪರ್ಯಾಯ ಮಾರ್ಗ ಕಂಡುಕೊಳ್ಳುವುದು ಒಳ್ಳೆಯದು.

ಮೂರು ಎಮ್ಮೆ ನೀರು ಪಾಲು
ಅದರಂತೆ ಹೊನ್ನೇತಾಳು ಗ್ರಾಮಪಂಚಾಯಿತಿಯ ನೆಂಟೂರು ಗ್ರಾಮ ಬೆಳ್ಳೂರು ಎಂಬ ಹಳ್ಳಿಯಲ್ಲಿ ಅಧಿಕ ಮಳೆಯಿಂದಾಗಿ ಮೂರು ಎಮ್ಮೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಈ ಮೂರು ಎಮ್ಮೆಗಳು ಸಚಿನ್ ಎಂಬುವರವರಿಗೆ ಸೇರಿದ್ದಾಗಿದೆ. ಈ ಬಗ್ಗೆ ಸಚಿನ್ ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸೋಮೇಶ್ವರದಿಂದ ತೀರ್ಥಹಳ್ಳಿ ಮತ್ತು ಶೃಂಗೇರಿ ಕಡೆ ಹೋಗುವ ರಸ್ತೆ ಮಾರ್ಗ ಮಧ್ಯದಲ್ಲಿ ಬರುವ ಆಗುಂಬೆ ಘಾಟಿಯಲ್ಲಿ ಗುಡ್ಡಕುಸಿತದಿಂದ ರಸ್ತೆಯ ಮೇಲೆ ಬಿದ್ದ ಮಣ್ಣನ್ನ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಸೋಮೇಶ್ವರದಿಂದ ಬರುವಾಗ ಮೂರನೇತಿರವಿನಲ್ಲಿ ಗುಡ್ಡಕುಸಿತಕಂಡಿದ್ದು ರಸ್ತೆಯ ಮೇಲಿನ ಮಣ್ಣನ್ನ ಜೆಸಿಬಿಯಿಂದ ತೆರವುಗೊಳಿಸಲಾಗಿದೆ. ಜೆಸಿಬಿಯಿಂದ ತೆರವುಗೊಳಿಸಿದರೂ ವಾಹನ ಸಂಚಾರ ಅನುಮಾನವಾಗಿದೆ.

ತಜ್ಞರನ್ನ ಕರೆಯಿಸಿ ಪರೀಕ್ಷೆ ನಡೆಸಿದ ನಂತರ ವಾಹನ ಸಂಚಾರಕ್ಕೆ ಅನುವು ಮಾಡುವ ಲಕ್ಷಣಗಳು ಕಂಡು ಬರುತ್ತಿದೆ. ಇಂದು ಸಂಜೆಯ ಒಳಗೆ ರಸ್ತೆಯ ಮೇಲಿನ ಕಾರ್ಯಾಚರಣೆ ಮುಗಿಯಬಹುದು. ಆದರೆ ಮಣ್ಣು ಉದುರಿ ಬರುತ್ತಿರುವುದರಿಂದ ರಸ್ತೆ ಸಂಚಾರ ಅನುಮಾನವಾಗಿದೆ.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago