ಶಿವಮೊಗ್ಗ: “ಸಿಎಂ ಸಿದ್ದರಾಮಯ್ಯ ಅವರು ಯಾವಾಗ ಏನು ಹೇಳ್ತಾರೆ, ಯಾರಿಗೂ ಗೊತ್ತಾಗಲ್ಲ. ಅವರಿಗೆ ಅಕ್ಕಿ ಮೇಲೆ, ಅಕ್ಕನ ಮೇಲೆ ಪ್ರೀತಿ ಇದೆ. ಮುಸ್ಲಿಂರ ವೋಟ್ ಬ್ಯಾಂಕ್ ಮೇಲೆ ಬಹಳ ಪ್ರೀತಿ ಇದೆ. ಹಿಂದೂಗಳ ವಿರೋಧ ಆಗುತ್ತೇನೋ ಎಂಬ ಭಯವೂ ಇದೆ” ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಹೋಗ್ತೇನೆ ಎಂಬ ವಿಚಾರವಾಗಿ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರರವರು, ಮೊನ್ನೆ ಮೊನ್ನೆವರೆಗೂ ನಾವು ಹೋಗಲ್ಲ ಎಂದು ಹೇಳಿದ್ದರು. ನಾನು ಯಾಕೇ ಹೋಗಬೇಕು.? ಆಯೋಧ್ಯೆನಲ್ಲೇ ರಾಮ ಇರೋದಾ..? ಇಲ್ಲಿ ಎಲ್ಲೂ ಇಲ್ವಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಈಗ ಅವರೇ ನಾನು ಕಾರ್ಯಕ್ರಮ ಮುಗಿದ ಮೇಲೆ ಹೋಗ್ತಿನಿ ಎಂದಿದ್ದಾರೆ ಎಂದು ಹೇಳಿದ್ದಾರೆ.
ಬಳಿಕ ರಾಮ ಯಾರನ್ನು ಬಿಡೋದಿಲ್ಲ ರೀ. ಅಲ್ಲಿಗೆ ಕರೆಸಿಕೊಳ್ತಾನೆ. ಎಲ್ಲರೂ ಹೋಗ್ತಾರೆ. ಅಯೋಧ್ಯೆ ಈ ದೇಶದ ಸಾಂಸ್ಕೃತಿಕ ಹೃದಯ ಇದ್ದಂತೆ. ತ್ಯಾಗ, ಬಲಿದಾನ, ಹೋರಾಟದ ಪ್ರತೀಕ ಆಯೋಧ್ಯೆ ರಾಮ ಮಂದಿರ ಎಂದು ಹೇಳಿದರು.
ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…