News Karnataka Kannada
Friday, May 03 2024
ಶಿವಮೊಗ್ಗ

ಶಿವಮೊಗ್ಗ ಬೈಪಾಸ್‌ ರಸ್ತೆಯ ನೂತನ ಸೇತುವೆ ಲೋಕಾರ್ಪಣೆ ಮಾಡಿದ ಬಿ.ವೈ.ರಾಘವೇಂದ್ರ

ತುಂಗಾ ನದಿಗೆ ಅಡ್ಡಲಾಗಿ ನಗರದ ಬೈಪಾಸ್‌ ರಸ್ತೆಯಲ್ಲಿ ನಿರ್ಮಿಸಲಾಗಿರುವ ನೂತನ ಸೇತವೆಯನ್ನು ಸಂಸದ ಬಿ.ವೈ.ರಾಘವೇಂದ್ರ ಲೋಕಾರ್ಪಣೆ ಮಾಡಿದರು. ಇಂದಿನಿಂದ ಸೇತುವೆ ಮೇಲೆ ವಾಹನ ಸಂಚಾರ ಆರಂಭವಾಗಿದೆ.
Photo Credit : News Kannada

ಶಿವಮೊಗ್ಗ: ತುಂಗಾ ನದಿಗೆ ಅಡ್ಡಲಾಗಿ ನಗರದ ಬೈಪಾಸ್‌ ರಸ್ತೆಯಲ್ಲಿ ನಿರ್ಮಿಸಲಾಗಿರುವ ನೂತನ ಸೇತವೆಯನ್ನು ಸಂಸದ ಬಿ.ವೈ.ರಾಘವೇಂದ್ರ ಲೋಕಾರ್ಪಣೆ ಮಾಡಿದರು. ಇಂದಿನಿಂದ ಸೇತುವೆ ಮೇಲೆ ವಾಹನ ಸಂಚಾರ ಆರಂಭವಾಗಿದೆ.

ಹೇಗಿದೆ ಹೊಸ ಸೇತುವೆ?
ಬೈಪಾಸ್‌ ರಸ್ತೆಯಲ್ಲಿ ಸೇತುವೆ ಸಮೀಪ ವಾಹನ ದಟ್ಟಣೆ ಹೆಚ್ಚು. ಈ ಹಿನ್ನೆಲೆ ಹಳೆ ಸೇತುವೆ ಪಕ್ಕದಲ್ಲಿಯೇ ಮತ್ತೊಂದು ಸೇತುವೆ ನಿರ್ಮಿಸಲಾಗಿದೆ. 20.16 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ. ವಿಶಾಲವಾದ ರಸ್ತೆ, ಪಾದಚಾರಿಗಳಿಗೆ ವಾಕಿಂಗ್‌ ಪಾಥ್‌ ಇದೆ.

ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಈ ಭಾಗಕ್ಕೆ ಸೇತುವೆಯ ಅಗತ್ಯವಿತ್ತು. 20.16ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ. ಹಿಂದೆ ಒಂದು ಸರ್ಕಾರ ಶಂಕುಸ್ಥಾಪನೆ ನೆರವೇರಿಸಿ ಮತ್ತೊಂದು ಸರ್ಕಾರ ಬಂದಾಗ ಕಾಮಗಾರಿ ಪೂರ್ಣಗೊಳ್ಳುತ್ತಿತ್ತು. ಈಗ ಗುತ್ತಿಗೆದಾರರು ಶೀಘ್ರ ಕಾಮಗಾರಿ ಪೂರ್ಣಗೊಳಿಸಿದರೆ ಬೋನಸ್‌ ದೊರೆಯಲಿದೆ. ಹಾಗಾಗಿ ಎಲ್ಲ ಕಾಮಗಾರಿಗಳು ವೇಗ ಪಡೆದಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು