ಶಿವಮೊಗ್ಗ: ಎದುರಾಳಿ ಪಕ್ಷದ ಅಭ್ಯರ್ಥಿ ಯಾರೆಂದು ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಕಾಂಗ್ರೆಸ್ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ ಕುಮಾರ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವಿರೋಧ ಪಕ್ಷದ ಅಭ್ಯರ್ಥಿ ಯಾರು ಎಂಬುದು ನನಗೆ ಮುಖ್ಯವಾಗಲ್ಲ. ಪ್ರಧಾನಿ ಮೋದಿ ಮಾಡಿದ ಅಭಿವೃದ್ಧಿ ಕೆಲಸವೇ ನಮಗೆ ಮುಖ್ಯ ಎಂದು ತಿಳಿಸಿದ್ದಾರೆ.
ಅಭಿವೃದ್ಧಿ ಹಾಗೂ ಕಾರ್ಯಕರ್ತರ ಪರಿಶ್ರಮವೇ ನಮಗೆ ಶಕ್ತಿ. ಈ ಚೌಕಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಈ ಬಾರಿಯೂ ಗೆಲ್ಲುವ ವಿಶ್ವಾಸವಿದೆ ಎಂದರು.