ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಡಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈಶ್ವರಪ್ಪ ಪುತ್ರ ಕಾಂತೇಶ್ಗೆ ಬಿಜೆಪಿ ಟಿಕೆಟ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಲೂ ಕಾಲ ಮಿಂಚಿಲ್ಲ, ಅವರು ನನ್ನ ಜೊತೆ ಬಂದ್ರೆ ದೆಹಲಿಗೆ ಕರೆದುಕೊಂಡು ಹೋಗುತ್ತೇನೆ. ಅಮಿತ್ ಶಾ ಜೊತೆ ಮಾತಾನಾಡಿಸುತ್ತೇನೆ. ಸೀಟ್ ಕೊಡಿಸಲು ನನ್ನಿಂದ ಆಗುವ ಎಲ್ಲಾ ಪ್ರಯತ್ನ ಮಾಡುತ್ತೇನೆ. ಎಲ್ಲಾ ರೀತಿಯ ಪ್ರಯತ್ನ ಮಾಡಲು ನಾನು ಸಿದ್ಧನಿದ್ದೇನೆ ಎಂದರು.
ಈಶ್ವರಪ್ಪ ಜೊತೆಗೆ ಕರೆದುಕೊಂಡು ಹೋಗಿ ಮಾತನಾಡಬಹುದು. ಅವರ ಮೂಲಕ ಕೇಂದ್ರಕ್ಕೆ ಮನವಿ ಮಾಡುತ್ತೇನೆ. ದಯವಿಟ್ಟು ಬನ್ನಿ ಈಶ್ವರಪ್ಪನವರೇ ದೆಹಲಿಗೆ ಹೋಗೋಣ, ಅಮಿತ್ ಶಾ ಮೀಟ್ ಮಾಡಿಸುತ್ತೇನೆ. ನಾನು ನಿಮ್ಮ ಜೊತೆ ಇದ್ದು ಅಮಿತ್ ಶಾ ಹತ್ತಿರ ಮಾತಾನಾಡಿಸುತ್ತೇನೆ ಎಂದು ಬಿಎಸ್ವೈ ಹೇಳಿದ್ದಾರೆ.