ಶಿವಮೊಗ್ಗ: ಹಿಜಾಬ್ ನಿಷೇಧ ಆದೇಶ ವಾಪಸ್ ತೆಗೆದುಕೊಳ್ಳುತ್ತೇನೆಂದು ಹೇಳಿದ ಸಿಎಂ ಈಗ ಉಲ್ಟಾ ಹೊಡೆದಿದ್ದಾರೆ. ನಾನು ಹಾಗೇ ಹೇಳಿಲ್ಲ, ಪರಿಶೀಲನೆ ಮಾಡ್ತೀನಿ ಅಂದಿದ್ದಾರೆ.
ಇದು ರಾಜ್ಯದಲ್ಲಿ ಹಿಂದುತ್ವದ ಶಕ್ತಿಗೆ ಸಿಕ್ಕ ಜಯ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ರಾಜ್ಯದಲ್ಲಿ ಹಿಜಾಬ್ ರಾಜಕಾರಣ ಮಾಡಲು ಪ್ರಯತ್ನ ಮಾಡಿದ್ದರು.
ಮುಸಲ್ಮಾನರ ಸಂತೃಪ್ತಿಪಡಿಸಿ, ರಾಜಕೀಯ ಮಾಡಲು ನೋಡಿದ್ದರು. ಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಪಡೆಯಲು ಸಿಎಂ ಹೇಳಿಕೆ ಕೊಟ್ಟಿದ್ದರು. ಆದರೆ, ಇದಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಿಎಂ ಸಿದ್ದರಾಮಯ್ಯಗೆ ಉತ್ತರ ಬಂದಿದೆ. ಈ ಬೆದರಿಕೆಗೆ ಬೆದರಿದ ಸಿಎಂ ಉಲ್ಟಾ ಹೊಡೆದಿದ್ದಾರೆ ಎಂದರು.