ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿ ಶಿಸ್ತು ಸಮಿತಿ ಸೋಮವಾರ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಅವರು ಸೋಮವಾರ ಈಶ್ವರಪ್ಪ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ.
ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ. ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಕಣದಿಂದ ಹಿಂದೆ ಸರಿಯದ ಕಾರಣ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ನಾಮಪತ್ರ ವಾಪಸ್ ಪಡೆಯಬಹುದು ಎಂಬ ನಿರೀಕ್ಷೆ ಹುಸಿಯಾಗಿದ್ದು, ಯಾರೋಬ್ಬರ ಮನವಿಗೂ ಈಶ್ವರಪ್ಪ ಅವರು ಜಗ್ಗಲೇ ಇಲ್ಲ.
ಚುನಾವಣಾ ಆಯೋಗ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಅವರಿಗೆ ಚುನಾವಣೆ ಚಿಹ್ನೆ ನೀಡಿದ್ದು, ”ಕೈ ಕಟ್ಟಿಕೊಂಡ ರೈತ ಮತ್ತು ಎರಡು ಕಬ್ಬುಗಳು” ಇರುವ ಚಿಹ್ನೆಯನ್ನು ನೀಡಲಾಗಿದೆ.