ಶಿವಮೊಗ್ಗ: ಬಿಎಸ್ವೈ ಕುಟುಂಬದ ವಿರುದ್ಧ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ. ಬಿಎಸ್ವೈ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಬಂಡಾಯ ಸ್ಪರ್ಧೆ ಮಾಡುವುದು ಖಚಿತ ಪಡಿಸಿದ್ದಾರೆ ಅಲ್ಲದೆ , ಕಾರ್ಯಕರ್ತರು, ಅಭಿಮಾನಿಗಳ ಸಂಘಟನೆ ಆರಂಭಿಸಿದ್ದಾರೆ. ಹಾಗೂ ಈ ಮಾತಿನಿಂದ ಎಂದಿಗೂ ಹಿಂದೆ ಸರಿಯುದಿಲ್ಲ ಎಂದು ಹೇಳಿದ್ದಾರೆ.
ನಾಳೆ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಬಂಡಾಯ ಘೋಷಣೆ ಮಾಡಿದ್ದಾರೆ. ಈ ನಡುವೆ ಬಜೆಪಿ ಪ್ರಮುಖಕರು ಈಶ್ವರಪ್ಪ ಮನೆಗೆ ಭೇಟಿ ನೀಡಿ ಚರ್ಚೆ ಮಾಡಿದರೂ ಸಂಧಾನ ವಿಫಲಗೊಂಡಿದೆ ನಿರಾಸೆಯಿಂದ ಬಿಜೆಪಿ ನಾಯಕರು ವಾಪಸ್ ಆಗಿದ್ದಾರೆ ಬಳಿಕ ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ, ನಾನು ಮೋದಿ ಪರ ಧ್ವನಿ ಎತ್ತುತ್ತೇನೆ. ಆದರೆ ಮೋದಿ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ ಎಂದು ಖಚಿತಪಡಿಸಿದ್ದಾರೆ.
ಮಗನಿಗೆ ಟಿಕೇಟ್ ಸಿಕ್ಕಿಲ್ಲ ಎಂಬ ಕೋಪ ಇಲ್ಲ ಆದರೆ ಇನ್ನೂ ಕೆಲವರಿಗೆ ತುಂಬಾ ಮೋಸವಾಗಿದೆ .ಬಿಜೆಪಿ ಪಕ್ಷ ಯಡಿಯೂರಪ್ಪ ಅವರ ಮುಷ್ಟಿಯಲ್ಲಿದೆ, ಅವರು ರಾಜ್ಯಾಧ್ಯಕ್ಷರು ಲಿಂಗಾಯತರೇ ಬೆಕೆಂದಿದ್ದರೆ ಯತ್ನಾಳನ್ನು ಮಾಡಬಹುದಿತ್ತು ಯಾಕೆ ಮಾಡಲಿಲ್ಲ? ಏಕೆಂದರೆ ಅವರಿಗೆಲಿಂಗಾಯತರು ಬೆಳೆಯುವುದು ಇವರಿಗೆ ಇಷ್ಟವಿಲ್ಲ ಓಕೆ. ಒಕ್ಕಲಿಗ ನಾಯಕರನ್ನಾದರೂ ಮಾಡಬಹುದಿತ್ತು. ಯಾಕೆ ಮಾಡಿಲ್ಲ ಎಂದು ಯಡಿಯೂರಪ್ಪ ಅವರನ್ನು ಪ್ರಶ್ನಿಸಿದರು.