News Karnataka Kannada
Monday, May 13 2024
ಶಿವಮೊಗ್ಗ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಮುಕ್ತನಾಗುವ ವಿಶ್ವಾಸವಿತ್ತು

ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡ್ತೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ತಂದೆ ಮಕ್ಕಳ ಕೈಗೆ ಪಕ್ಷ ಸಿಕ್ಕಿದೆ, ಕಾರ್ಯಕರ್ತರು ಪರದಾಡ್ತಿದ್ದಾರೆ. ಪಕ್ಷ ಉಳಿಸಲು ನನ್ನ ಈ ಹೋರಾಟ ಎಂದು ಕೆಎಸ್ ಈಶ್ವರಪ್ಪ ಹೇಳಿದರು.
Photo Credit : Twitter

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಮುಕ್ತನಾಗುವ ಖಚಿತ ವಿಶ್ವಾಸವಿತ್ತು ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ಹೇಳಿದರು.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬಿಜೆಪಿ ನಗರ ಘಟಕದಿಂದ ಹಮ್ಮಿಕೊಂಡಿದ್ದ ಅಭಿನಂದನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಹೆಸರು ಬಂದಾಗ ಮೊದಲು ತುಂಬಾ ಬೇಸರವಾಗಿತ್ತು. ಪಕ್ಷ ಹಾಗೂ ಸರಕಾರಕ್ಕೆ ನನ್ನಿಂದ ಮುಜುಗರ ಆಯಿತು, ನಾನು ತಪ್ಪು ಮಾಡಿಲ್ಲ. ನಮ್ಮ ಮನೆ ದೇವತೆ ಚೌಡೇಶ್ವರಿ ನನ್ನನ್ನು ಆರೋಪಮುಕ್ತನನ್ನಾಗಿ ಮಾಡುತ್ತಾಳೆ ಎಂದು ಹಿಂದೆಯೇ ಹೇಳಿದ್ದೆ ಎಂದರು.

ಹಿರಿಯ ಮುಖಂಡ ಭಾನುಪ್ರಕಾಶ್‌, ಶಾಸಕರಾದ ಹರತಾಳು ಹಾಲಪ್ಪ, ಡಿ.ಎಸ್‌. ಅರುಣ್‌ ಮುಂತಾದವರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು