ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಮುಕ್ತನಾಗುವ ಖಚಿತ ವಿಶ್ವಾಸವಿತ್ತು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.
ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬಿಜೆಪಿ ನಗರ ಘಟಕದಿಂದ ಹಮ್ಮಿಕೊಂಡಿದ್ದ ಅಭಿನಂದನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಹೆಸರು ಬಂದಾಗ ಮೊದಲು ತುಂಬಾ ಬೇಸರವಾಗಿತ್ತು. ಪಕ್ಷ ಹಾಗೂ ಸರಕಾರಕ್ಕೆ ನನ್ನಿಂದ ಮುಜುಗರ ಆಯಿತು, ನಾನು ತಪ್ಪು ಮಾಡಿಲ್ಲ. ನಮ್ಮ ಮನೆ ದೇವತೆ ಚೌಡೇಶ್ವರಿ ನನ್ನನ್ನು ಆರೋಪಮುಕ್ತನನ್ನಾಗಿ ಮಾಡುತ್ತಾಳೆ ಎಂದು ಹಿಂದೆಯೇ ಹೇಳಿದ್ದೆ ಎಂದರು.
ಹಿರಿಯ ಮುಖಂಡ ಭಾನುಪ್ರಕಾಶ್, ಶಾಸಕರಾದ ಹರತಾಳು ಹಾಲಪ್ಪ, ಡಿ.ಎಸ್. ಅರುಣ್ ಮುಂತಾದವರಿದ್ದರು.