ಶಿವಮೊಗ್ಗ: ಕರ್ನಾಟಕವು ಸ್ಟಾರ್ಟ್ಪ್ ಕ್ಷೇತ್ರದಲ್ಲೂ ನಾವು ಸಾಕಷ್ಟು ಬೆಳೆದಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಶಿವಮೊಗ್ಗದಲ್ಲಿ ಆಯನೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದರು.
ಕರ್ನಾಟಕದ ಅಭಿವೃದ್ಧಿಯನ್ನು ಕಾಂಗ್ರೆಸ್ ಪಕ್ಷ ಎಂದೂ ಬಯಸುವುದಿಲ್ಲ. ಭ್ರಷ್ಟಾಚಾರದ ಮೂಲಕ ಕಾಂಗ್ರೆಸ್ ನಾಯಕರು ಶ್ರೀಮಂತರಾಗುತ್ತಿದ್ದಾರೆ. ಆದರೆ ಕರ್ನಾಟಕದ ಅಭಿವೃದ್ಧಿಗೆ ಒಳ್ಳೆಯ ಯೋಜನೆ ತಂದಿಲ್ಲ ಎಂದರು.
ಅಡಕೆ ಆಮದು ನೀತಿಯಲ್ಲಿ ಕಾಂಗ್ರೆಸ್ಗೂ ಬಿಜೆಪಿಗೂ ಅಂತರವಿದೆ. ಈ ಹಿಂದೆ ಕರ್ನಾಟಕದ ಅಡಕೆ ಬೆಳೆಗಾರರಿಗೆ ಸಂಕಷ್ಟ ಎದುರಾಗಿತ್ತು. ಯಡಿಯೂರಪ್ಪ ಗುಜರಾತ್ಗೆ ನನ್ನನ್ನು ನೋಡಲು ಬಂದಿದ್ದರು. ರೈತರ ರಕ್ಷಣೆ ಮಾಡುವಂತೆ ನನ್ನನ್ನು ಕೇಳಿಕೊಂಡಿದ್ದರು. ವಿದೇಶದಿಂದ ಅಡಿಕೆ ಆಮದು ಮಾಡಿದರೆ ಇಲ್ಲಿನ ರೈತರಿಗೆ ಅನ್ಯಾಯವಾಗಲಿದೆ ಎಂದಿದ್ದರು. ನಾನು ದೆಹಲಿಯಲ್ಲಿ ಅಧಿಕಾರ ಹಿಡಿದ ಬಳಿಕ ನೀತಿಯಲ್ಲಿ ಬದಲಾವಣೆ ಮಾಡುವ ಮೂಲಕ ಅಡಿಕೆ ಆಮದು ಸುಂಕ ಹೆಚ್ಚಿಸಿದ್ದೇವೆ. ಇದರಿಂದ ಕರ್ನಾಟಕದ ರೈತರಿಗೆ ಅನುಕೂಲವಾಗಿದೆ ಎಂದರು.