ಶಿವಮೊಗ್ಗ: ಗೆಲ್ಲುವ ಅಭ್ಯರ್ಥಿಗಳಿಗೆ, ಯಾರು ಪಕ್ಷಕ್ಕೆ ನಿಷ್ಠರಾಗಿರುತ್ತಾರೆ ಅವರಿಗೆ ಟಿಕೆಟ್ ಸಿಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ನಿನ್ನೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ ಲೋಕಸಭಾ ಚುನಾವಣೆ ಘೋಷಣೆ ಆಗಿಲ್ಲ. ಆದರೆ ಪಕ್ಷ ಈಗಾಗಲೇ 195 ಸೀಟ್ ಘೋಷಣೆ ಮಾಡಿದೆ. ಎಲ್ಲರೊಂದಿಗೆ ಮಾತುಕತೆ ನಡೆಸಿ, ಗೆಲ್ಲುವ ಅಭ್ಯರ್ಥಿಗಳ ಗಮನಿಸಿ ರಾಷ್ಟ್ರೀಯ ನಾಯಕರು ಟಿಕೆಟ್ ಕುರಿತು ರ್ತೀಮಾನ ಮಾಡುತ್ತಾರೆ ಎಂದರು.
ಇನ್ನೂ ಹಾಲಿ ಸಂಸದರಿಗೆ ಟಿಕೆಟ್ ನೀಡಲ್ಲ ಎಂಬ ಊಹಾಪೋಹಕ್ಕೆ ಉತ್ತರಿಸಿದ ಜೋಶಿ, ಅಂತಹ ಯಾವುದೇ ಪ್ರಸ್ತಾಪ ಪಕ್ಷದ ಮುಂದಿಲ್ಲ ಎಂದರು.
ದೇಶದಲ್ಲಿ ಬಿಜೆಪಿ ಈ ಬಾರಿ ಐತಿಹಾಸಿಕ ದಾಖಲೆ ವಿಜಯ ಸಾಧಿಸಲಿದೆ. 370ಕ್ಕೂ ಹೆಚ್ಚು ಬಿಜೆಪಿ ಗೆಲ್ಲಲ್ಲಿದೆ. ನಾವು ಮತ್ತೆ ಅಧಿಕಾರ ಪಡೆದೇ ಪಡೆಯುತ್ತೇವೆ. ಮುಂದೆ ದೇಶದಲ್ಲಿ ಅಭೂತ ಪೂರ್ವ ಬದಲಾವಣೆ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.