ಶಿವಮೊಗ್ಗ: ಕೆಪಿಸಿಸಿ ಹಿಂದುಳಿದ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಧು ಬಂಗಾರಪ್ಪನವರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಭರ್ಜರಿ ಸ್ವಾಗತ ದೊರೆತಿದೆ.
ಮಧು,ಬಂಗಾರಪ್ಪ ಗೆ. ಶಿವಮೊಗ್ಗ ದಲ್ಲಿ ಅದ್ದೂರಿ ಸ್ವಾಗತದೊರೆತಿದ್ದು, ಎಂಆರ್ ಎಸ್ ಸರ್ಕಲ್ ನಿಂದ ಕಾಂಗ್ರೆಸ್ ಕಚೇರಿ ವರೆಗೆ ಬೈಕ್ ಜಾಥಾ ನಡೆದಿದೆ.
ಸಾವಿರಾರು ಕಾರ್ಯಕರ್ತರು ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರು ಜಾಥಾದಲ್ಲಿ ಭಾಗಿಯಾಗಿದ್ದು, ಕಾಂಗ್ರೆಸ್ ಕಚೇರಿಯಲ್ಲಿ ಮಧು ಬಂಗಾರಪ್ಪ ಗೆ ಅಭಿನಂದನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಕಚೇರಿ ಬಳಿ ಕಾರ್ಯಕರ್ತರು ಅಭಿಮಾನಿಗಳು ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತಿಸಲಾಗಿದೆ. ಈವೇಳೆ ಸ್ಥಳೀಯ ನಾಯಕರು ಸಾಥ್ ನೀಡಿದ್ದರು. ಕಚೇರಿಯ ವೇದಿಕೆ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ, ಮಾಜಿ ಸಚಿವ ರೇವಣ್ಣ ಮೊದಲಾದವರು ಉಪಸ್ಥಿತರಿದ್ದರು