ಶಿವಮೊಗ್ಗ: ಜಿಲ್ಲೆಯ ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪದಲ್ಲಿ ನಿಗೂಢ ವಸ್ತು ಸ್ಪೋಟಗೊಂಡ ಪರಿಣಾಮ, ಇಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿರೋದಾಗಿ ತಿಳಿದು ಬಂದಿದೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾ| ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪ ಬ್ಯಾಗ್ ನಲ್ಲಿ ಇಟ್ಟಿದ್ದಂತ ವಸ್ತು ಸ್ಪೋಟಗೊಂಡಿದೆ. ಉಮೇಶ್ ಎಂಬಾತ ಇಟ್ಟುಹೋಗಿದ್ದ ಬ್ಯಾಗ್ ನಲ್ಲಿದ್ದ ವಸ್ತುವೊಂದು ಸ್ಪೋಟಗೊಂಡ ಪರಿಣಾಮ ಬೆಡ್ ಶೀಟ್ ಮಾರಲು ಬಂದಿದ್ದ ಆಂಥೋನಿ ಸೇರಿದಂತೆ, ಇಬ್ಬರು ಗಾಯಗೊಂಡಿರೋದ್ದಾರೆ.
ಗಾಯಾಳುಗಳನ್ನು ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದಂತ ಶಿರಾಳಕೊಪ್ಪ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇನ್ನು ಈ ಬಗ್ಗೆ ಶಿವಮೊಗ್ಗ ಎಪ್ಫಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿ, ಹಂದಿ ಹೊಡೆಯಲು ಬಳಕೆಗೆ ತಂದಿರುವ ಸಿಡಿಮದ್ದು ಬ್ಯಾಗ್ನಲ್ಲಿತ್ತು. ಅದೇ ಆಕಸ್ಮಿಕವಾಗಿ ಸ್ಪೋಟಗೊಂಡಿದೆ. ಘಟನೆಯಲ್ಲಿ ಓರ್ವ ಬೆಡ್ ಶೀಟ್ ವ್ಯಾಪಾರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಆಗಿದ್ಥಾನೆ. ಆತನಿಗೆ ಸಣ್ಣ ಪುಟ್ಟ ಗಾಯ ಆಗಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.