ಶಿವಮೊಗ್ಗ: ನಕ್ಸಲ್ ಹೋರಾಟ ಪ್ರಕರಣಗಳ ತನಿಖೆ ಚುರುಕಾಗಿದ್ದು ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ತೀರ್ಥಹಳ್ಳಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ಕಳೆದ ತಿಂಗಳು ನಕ್ಸಲರ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಶಿವಮೊಗ್ಗ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಇದೀಗ ಮತ್ತೊಬ್ಬ ನಕ್ಸಲ್ ಹೋರಾಟಗಾರ್ತಿಯನ್ನು ಕೋರ್ಟ್ಗೆ ಹಾಜರುಪಡಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಸಮೀಪದ ತಾರಳ್ಳಿಕೊಡಿಗೆ ಗ್ರಾಮದ ಶ್ರೀಮತಿ, ನಕ್ಸಲ್ ಹೋರಾಟಗಾರ ಬಿ.ಜಿ. ಕೃಷ್ಣಮೂರ್ತಿ ಜತೆ ಗುರುತಿಸಿಕೊಂಡಿದ್ದರು. ಇವರನ್ನು ಕಳೆದ ವರ್ಷ ನ.೭ರಂದು ಕೇರಳ ಪೊಲೀಸರು ಅರೆಸ್ಟ್ ಮಾಡಿದ್ದರು. ನಂತರ ಬಿಗಿ ಭದ್ರತೆಯೊಂದಿಗೆ ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಶಿವಮೊಗ್ಗಕ್ಕೆ ಶ್ರೀಮತಿಯನ್ನು ಕರೆತರಲಾಗಿದೆ.