News Karnataka Kannada
Thursday, May 02 2024
ಶಿವಮೊಗ್ಗ

ಶಿವಮೊಗ್ಗದ ಸರ್ಜಿ ಆಸ್ಪತ್ರೆಯ ಮಕ್ಕಳ ತಜ್ಞ, ಡಾಕ್ಟರ್ ಎಚ್.ಎಸ್. ಸತೀಶ್ ನಿಧನ

Doctor
Photo Credit : By Author

ಶಿವಮೊಗ್ಗ: ಶಿವಮೊಗ್ಗದ ಸರ್ಜಿ ಆಸ್ಪತ್ರೆಯ ಮಕ್ಕಳ ತಜ್ಞ, ಗೋಪಾಳ ನಿವಾಸಿ ಡಾಕ್ಟರ್ ಎಚ್.ಎಸ್. ಸತೀಶ್(47) ಬುಧವಾರ ನಸುಕಿನಲ್ಲಿ ನಿಧನರಾಗಿದ್ದಾರೆ. ಇವರಿಗೆ ಮಿದುಳಿನಲ್ಲಿ ರಕ್ತಸ್ರಾವ ಆಗಿತ್ತು.

ಮೂರು ದಿನದ ಹಿಂದೆ ಕುಟುಂಬ ಸದಸ್ಯರ ಜೊತೆ ಉತ್ತರಕನ್ನಡ ಭಾಗಕ್ಕೆ ಪ್ರವಾಸಕ್ಕೆ ಹೋಗಿದ್ದ ಇವರು ದಿಢೀರ್ ಅಸ್ವಸ್ಥರಾಗಿದ್ದರು. ಅಲ್ಲಿಯೇ ಚಿಕಿತ್ಸೆ ಕೊಡಿಸಿ ಬಳಿಕ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. ಇವರಿಗೆ ಪತ್ನಿ ಡಾ. ಚೇತನಾ, ಮಕ್ಕಳಾದ ಸಂಜನಾ, ಸಮರ್ಥ ಇದ್ದಾರೆ.

ಇವರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 1 ಗಂಟೆಗೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ತ್ಯಾವಣಿಗೆ ಗ್ರಾಮದಲ್ಲಿ  ನೆರವೇರಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು