News Karnataka Kannada
Friday, May 10 2024
ಶಿವಮೊಗ್ಗ

ಶಿವಮೊಗ್ಗ: ಅಮರನಾಥದಲ್ಲಿ ಕರ್ನಾಟಕದ ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದ ಆರಗ ಜ್ಞಾನೇಂದ್ರ

Complaint filed against Araga Gyanendra for comments on Kharge's complexion
Photo Credit :

ಶಿವಮೊಗ್ಗ: ಪವಿತ್ರ ಯಾತ್ರಾಸ್ಥಳ ಅಮರನಾಥ್ ದಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದ್ದು, ಅಲ್ಲಿದ್ದ ಕರ್ನಾಟಕದ ಯಾತ್ರಿಗಳು ಸುರಕ್ಷಿತವಾಗಿದ್ದಾರೆ. ಅವರನ್ನು ಕರೆತರಲು ರಾಜ್ಯದಿಂದ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಈಗಾಗಲೇ ಸಂಬಂಧಿಸಿದ ನೋಡಲ್ ಅಧಿಕಾರಿಗಳು ಪ್ರಯತ್ನ ಆರಂಭಿಸಿದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲಿದ್ದೇವೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಜೊತೆ ಮಾತನಾಡಲಿದ್ದೇವೆ ಎಂದು ಶನಿವಾರ ಇಲ್ಲಿ ಸುದ್ದಿಗಾರರಿಗೆ ಹೇಳಿದರು.

ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಖ್ಯಮಂತ್ರಿ ಅವರು ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ಎಚ್ಚರಿಕೆಯಿಂದ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದು ಸೂಚನೆ ನೀಡಿದ್ದಾರೆ. ಮಳೆಯಿಂದ ತೀವ್ರ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಹಾರ ನೀಡುವ ಪ್ರಯತ್ನ ಮಾಡಿದ್ದೇವೆ. ಪರಿಹಾರ ವಿತರಣೆಗೆ ಜಿಲ್ಲಾಧಿಕಾರಿ, ತಹಶಿಲ್ದಾರ್ ಬಳಿ ಹಣ ಇದೆ. ಅದನ್ನು ಖರ್ಚು ಮಾಡಲು ಸೂಚಿಸಿದ್ದೇವೆ ಎಂದರು.

ತಮ್ಮ ರಾಜೀನಾಮೆಗೆ ಹಿಂದು ಜಾಗರಣ ವೇದಿಕೆ ಆಗ್ರಹಿಸಿರುವ ವಿಚಾರದ ಬಗ್ಗೆ ಮಾತನಾಡಿ. ಗೃಹ ಸಚಿವರನ್ನು ರಾಜೀನಾಮೆ ಕೇಳದೇ ಇನ್ನು ಯಾರನ್ನು ಕೇಳುತ್ತಾರೆ ಎಂದು ನಗುತ್ತಲೇ ಉತ್ತರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು