ಶಿವಮೊಗ್ಗ: ಕರ್ನಾಟಕ ಪೊಲೀಸರು ಮಂಗಳವಾರ ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧ ಸ್ಥಳಗಳಿಂದ ಐಸಿಸ್ ಜೊತೆ ನಂಟು ಹೊಂದಿರುವ ಮೂವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಬ್ಬರು ಭಯೋತ್ಪಾದಕ ಶಂಕಿತರನ್ನು ಶಿವಮೊಗ್ಗದಲ್ಲಿ ಬಂಧಿಸಲಾಗಿದ್ದು, ಮೂರನೇ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಧಿತರನ್ನು ಶಿವಮೊಗ್ಗ ಮೂಲದ ಸೈಯದ್ ಯಾಸಿನ್ ಅಕಾ ಬೈಲು ಮತ್ತು ಮಾಝ್ ಮತ್ತು ಮಂಗಳೂರಿನ ಅನ್ಸಾರ್ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ನ್ಯಾಯಾಲಯ ಮೂವರನ್ನು ಒಂಬತ್ತು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಪರಾರಿಯಾಗಿರುವ ಮತ್ತೋರ್ವ ಭಯೋತ್ಪಾದಕ ಶಂಕಿತ ಮೊಹಮ್ಮದ್ ಶಾರಿಕ್ಗಾಗಿ ಅಧಿಕಾರಿಗಳು ಶಿವಮೊಗ್ಗದಲ್ಲಿ ಹುಡುಕಾಟ ನಡೆಸಿದ್ದಾರೆ.
ಅರ್ಹ ಇಂಜಿನಿಯರ್ ಆಗಿರುವ ಯಾಸಿನ್ ಸುಧಾರಿತ ಸ್ಫೋಟಕಗಳನ್ನು ತಯಾರಿಸುವುದರಲ್ಲಿ ನಿಪುಣ. ಆರೋಪಿಗಳು ರಾಜ್ಯದಾದ್ಯಂತ ಸರಣಿ ಭಯೋತ್ಪಾದನಾ ದಾಳಿ ನಡೆಸಲು ಯೋಜನೆ ರೂಪಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ಯಾಸಿನ್ ಮತ್ತು ಮಾಜ್ ಅವರ ಪೋಷಕರು ತಮ್ಮ ಮಕ್ಕಳು ನಿರಪರಾಧಿ ಎಂದು ಹೇಳಿದ್ದಾರೆ. ಯಾಸಿನ್ ತಂದೆ ಅಯೂಬ್ ಖಾನ್ ಅವರು ತಮ್ಮ ಮಗ ಯಾವುದೇ ರೀತಿಯ ದೇಶ ವಿರೋಧಿ ಅಥವಾ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಮಗ ನಾಪತ್ತೆಯಾಗಿದ್ದಾನೆ ಎಂದು ಮಾಜ್ ಪೋಷಕರು ನ್ಯಾಯಾಲಯದಲ್ಲಿ ಹೇಬಿಯಸ್ ಕಾರ್ಪಸ್ ಪ್ರಕರಣ ದಾಖಲಿಸಿದ್ದಾರೆ.