ಶಿವಮೊಗ್ಗ: ಸಾಗರ ತಾ| ಚಿಪ್ಪಳ್ಳಿ ಬಳಿಯ ರಸ್ತೆಯಲ್ಲಿ ಕಾರು ಹತ್ತಿಸಿ ಸಹೋದರನನ್ನ ಹತ್ಯೆ ಮಾಡಿರುವ ಭಯಾನಕ ಘಟನೆ ನಡೆದಿದೆ.
ಶಿವಮೊಗ್ಗದ ಸಾಗರ ತಾ| ಚಿಪ್ಪಳಿ ಕ್ರಾಸ್ ಬಳಿ ಎನ್ ಹೆಚ್-206 ಪಕ್ಕದಲ್ಲಿ ಕೃತ್ಯ ನಡೆಸಲಾಗಿದೆ. ರಫೀಕ್ (45) ಕೊಲೆಯಾದ ದುರ್ದೈವಿ. ರಫೀಕ್, ಜಿಲ್ಲೆಯ ಸೊರಬ ತಾಲೂಕಿನ ತುಡನೀರು ಗ್ರಾಮದ ನಿವಾಸಿ. ಸಹೋದರರ ನಡುವಿನ ಆಸ್ತಿ ಕಲಹದ ಹಿನ್ನೆಲೆಯಲ್ಲಿ ಕೊಲೆ ನಡೆದಿತ್ತು.
ಸಹೋದರರ ಮಧ್ಯೆ ಗಲಾಟೆಯ ನಂತರ ಮೃತ ರಫಿಕ್ ರಸ್ತೆ ಮಧ್ಯೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಂತೆ ಕಾಣ್ತಿದ್ದಾರೆ. ಆಗ ಹಿಂದಿನಿಂದ ವೇಗವಾಗಿ ಕಾರು ಚಲಾಯಿಸಿಕೊಂಡ ಬಂದ ಆರೋಪಿ ಸಹೋದರ ಆತ ಮೇಲೆ ಕಾರನ್ನು ಹತ್ತಿಸಿ ಪರಾರಿಯಾಗಿದ್ದಾನೆ. ಈ ದೃಶ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ಪ್ರಯಾಣಿಕರು ಸೆರೆ ಹಿಡಿದಿದ್ದಾರೆ.
ಇನ್ನು ಕೊಲೆ ಮಾಡಿದ ಬಳಿಕ ಸಾಗರ ತಾ| ಆನಂದಪುರದಲ್ಲಿರುವ ಮುರುಘಾ ಮಠದ ಆವರಣಕ್ಕೆ ಹೋಗಿ ಬಟ್ಟೆ ಬದಲಿಸಿದ್ದ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…