ಸಾಗರ: ದಿನಾಂಕಃ- 20-10-2022 ರಂದು ರಾತ್ರಿ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಳ್ಳಾ ಗ್ರಾಮದ ಪಂಚಲಿಂಗೇಶ್ವರ ಮತ್ತು ಸಿದ್ದೇಶ್ವರ ದೇವಾಲಯದ ಬೀಗವನ್ನು ಮುರಿದು ಯಾರೋಕಳ್ಳರು ಬೆಳ್ಳಿ, ಹಿತ್ತಾಳೆ ಮತ್ತು ತಾಮ್ರದ ದೀಪ, ಘಂಟೆ, ಪಂಚಲೋಹದ ಮೂರ್ತಿ ಹಾಗೂ ಇತರೆ ದೇವರ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ದೇವಸ್ಥಾನ ಕಮಿಟಿಯವರು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0347/2022 ಕಲಂ 454, 457, 380 ಐಪಿಸಿ ರೀತ್ಯಾ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿರುತ್ತದೆ.
ಮಿಥುನ್ ಕುಮಾರ್ ಜಿ ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಅನಿಲ್ ಕುಮಾರ್ ಭೂಮರೆಡ್ಡಿ, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ರೋಹನ್ ಜಗದೀಶ್, ಐಪಿಎಸ್, ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು ಸಾಗರ ಉಪವಿಭಾಗರವರ ಮೇಲ್ವಿಚಾರಣೆಯಲ್ಲಿ ಸದರಿ ಪ್ರಕಣದಲ್ಲಿ ಕಳುವಾದ ವಸ್ತುಗಳು ಮತ್ತು ಆರೋಪಿತರ ಪತ್ತೆಗಾಗಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರವೀಣ್ ಕುಮಾರ್ ರವರ ನೇತೃತ್ವದಲ್ಲಿ ಕಾರ್ಗಲ್ ಪೊಲೀಸ್ ಠಾಣಾ ಪಿಎಸ್ಐ ತಿರುಮಲೇಶ್, ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಐ ಸುಜಾತ ಹಾಗೂ ಸಿಬ್ಬಂಧಿಗಳಾದ ಸಿಹೆಚ್.ಸಿ, ಸನಾವುಲ್ಲಾ, ಸಿಪಿಸಿ ರವಿಕುಮಾರ್, ಹನುಮಂತ ಜಂಬೂರ್ ಮತ್ತು ಶ್ರೀನಿವಾಸ್ ರವರುಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.
ಸದರಿ ತನಿಖಾ ತಂಡವು ದಿನಾಂಕಃ-11-01-2023 ರಂದು ಪ್ರರಕಣದ ಆರೋಪಿ ಮುಸ್ತಾಫ್ @ ಮೊಹಮ್ಮದ್ ಮುಸ್ತಫಾನನ್ನು ದಸ್ತಗಿರಿ ಮಾಡಿ ಆರೋಪಿತನಿಂದ ಒಟ್ಟು 04 ದೇವಸ್ಥಾನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ಮೌಲ್ಯ 25,000/- ರೂಗಳ ತಾಮ್ರದ ದೀಪ ಮತ್ತು ಘಂಟೆಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ದ್ವಿ ಚಕ್ರ ವಾಹನವನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ.
ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಶ್ಲಾಘಿಸಿ ಅಭಿನಂದಿಸಿರುತ್ತಾರೆ.
ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್ಡ್ರೈವ್ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…
ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.
ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…
ಹೆಚ್ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…
ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…
ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…