ಶಿವಮೊಗ್ಗ: ನಗರದ ಆಲ್ಕೋಳ ಸರ್ಕಲ್ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಈ ಮಾರಾಮಾರಿಯಲ್ಲಿ ಐವರಿಗೆ ಚಾಕು ಇರಿತ ಉಂಟಾಗಿದ್ದು ಇವರನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಲ್ಕೋಳ ಸಮೀಪ ಇರುವ ವಿಶಾಲ್ ಮಾರ್ಟ್ ಬಳಿಯಿರುವ ಎಲ್ಐಸಿ ಆಫೀಸ್ ಹಿಂಭಾಗದಲ್ಲಿ ಎರಡು ಗುಂಪುಗಳ ನಡುವೆ ಪರಸ್ಪರ ಮಾರಾಮಾರಿಯಾಗಿದೆ. ಘಟನೆಯಲ್ಲಿ ಐದು ಮಂದಿಗೆ ಚಾಕು ಇರಿಯಲಾಗಿದೆ. ಇದರಲ್ಲಿ ಒಬ್ಬರ ಸ್ಥಿತಿ ಗಂಭೀರವೆಂದು ತಿಳಿದು ಬಂದಿದೆ, ಐವರನ್ನ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದೆ.
ಸ್ನೇಹಿತರಾಗಿದ್ದ ಪವನ್ ಮತ್ತು ಕಿರಣ್ ನಡುವೆ ಕಳೆದೆರಡು ವರ್ಷಗಳಿಂದ ಭಿನ್ನಾಭಿಪ್ರಾಯಗಳುಂಟಾಗಿದ್ದು, ಇಬ್ವರ ನಡುವಿನ ವೈಯುಕ್ತಿಕ ದ್ವೇಷಕ್ಕೆ ನಿನ್ನೆ ಚಾಕು ಇರಿತ ಘಟನೆ ನಡೆದಿದೆ ಎನ್ನಲಾಗಿದೆ. ನಿನ್ನೆ ರಾತ್ರಿ ನೇತಾಜಿ ಸರ್ಕಲ್ನಲ್ಲಿ ಇದೇ ವಿಚಾರಕ್ಕೆ ಕಿರಿಕ್ ಆಗಿದೆ.
ನೇತಾಜಿ ಸರ್ಕಲ್ನಲ್ಲಿ ನಡೆದ ಜಗಳದ ಬೆನ್ನಲ್ಲಿಯೇ ಪವನ್ ಆ್ಯಂಡ್ ಟೀಂ ವಿಶಾಲ್ ಮಾರ್ಟ್ ಸಮೀಪವಿದ್ದ ಕಿರಣ್ ಆ್ಯಂಡ್ ಗ್ಯಾಂಗ್ ಮೇಲೆ ಅಟ್ಯಾಕ್ ಮಾಡಿದೆ. ಈ ವೇಳೆ ಕಿರಣ್ ಗ್ಯಾಂಗ್ನ ಐವರಿಗೆ ಗಾಯಗಳಾಗಿದೆ. ಐವರಿಗೆ ಇರಿತವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಅಪಾಯವಿಲ್ಲವೆಂದು ವೈದ್ಯರು ಹೇಳಿದ್ದಾರೆ.
ಇನ್ನೂ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪವನ್ ಹಾಗೂ ಆತನ ಗ್ಯಾಂಗ್ನಲ್ಲಿದ್ದು ದಾಳಿ ಮಾಡಿದ ಆರೋಪಿಗಳಿಗಾಗಿ ಹುಡುಕಾಟ ನಡೆಸ್ತಿದ್ದಾರೆ.