News Karnataka Kannada
Monday, April 29 2024
ಶಿವಮೊಗ್ಗ

ಶಿವಮೊಗ್ಗ: ಗಾಂಧಿ ಬಜಾರ್‌ ನ ತರಕಾರಿ ಮಾರುಕಟ್ಟೆಯಲ್ಲಿ ಓರ್ವ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ

Shimoga: A man was attacked with a knife at a vegetable market in Gandhi Bazar.
Photo Credit : By Author

ಶಿವಮೊಗ್ಗ: ಶಿವಮೊಗ್ಗ ಟೌನ್‌ ದೊಡ್ಡಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಗಾಂಧಿ ಬಜಾರ್‌ ನ ತರಕಾರಿ ಮಾರುಕಟ್ಟೆಯ ಹತ್ತಿರ ಮನೆಯ ಕಡೆ ಹೋಗುತ್ತಿದ್ದ ಪ್ರೇಮ್‌ ಸಿಂಗ್‌, 20 ವರ್ಷ, 5ನೇ ಕ್ರಾಸ್‌ ಅಶೊಕ ರಸ್ತೆ, ಶಿವಮೊಗ್ಗ ರವರಿಗೆ ಚಾಕುವಿನಿಂದ ಹಲ್ಲೆ ಮಾಡಿದ ಬಗ್ಗೆ ಗುನ್ನೆ ಸಂಖ್ಯೆ 334/2022 ಕಲಂ 307 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಆರೋಪಿತರಾದ ನದೀಮ್‌ ಮತ್ತು ಅಬ್ದುಲ್‌ ರೆಹಮಾನ್‌ ರವರುಗಳನ್ನು ದಸ್ತಗಿರಿ ಮಾಡಲಾಗಿರುತ್ತದೆ.

ನಂತರ ಇನ್ನುಳಿದ ಆರೋಪಿಗಳ ಪತ್ತೆ ಕಾರ್ಯಾಚರಣೆಯ ಸಮಯದಲ್ಲಿ ದಿನಾಂಕ 16-08-2022 ರಂದು ಬೆಳಗಿನ ಜಾವ ಆರೋಪಿತನಾದ ಮೊಹಮ್ಮದ್‌ ಜಬೀ @ ಚರ್ಬಿ, 30 ವರ್ಷ, ಮಾರ್ನಾಮಿ ಬೈಲು, ಶಿವಮೊಗ್ಗ ಈತನು ಪೊಲೀಸ್ ಸಿಬ್ಬಂಧಿಯವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಮುಂದಾದಾಗ ಶ್ರೀ ಮಂಜುನಾಥ್‌ ಎಸ್‌ ಕುರಿ. ಪಿಎಸ್ಐ ವಿನೋಬನಗರ ಪೊಲೀಸ್ ಠಾಣೆ ರವರು ತಮ್ಮ ಮತ್ತು ಸಿಬ್ಬಂಧಿಗಳ ಆತ್ಮ ರಕ್ಷಣೆಗಾಗಿ ಆರೋಪಿಯ ಬಲಗಾಲಿಗೆ ಸೇವಾ ಪಿಸ್ತೂಲ್ ನಿಂದ ಗುಂಡು ಹಾರಿಸಿರುತ್ತಾರೆ.

ನಂತರ ಗಾಯಗೊಂಡ ಆರೋಪಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ದೊಡ್ಡಪೇಟೆ ಠಾಣೆಯಲ್ಲಿ ಗುನ್ನೆ ಸಂಖ್ಯೆ 0337/2022 ಕಲಂ 353, 307 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು