ಶಿವಮೊಗ್ಗ: ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಮೈಸೂರು ತಾಳಗುಪ್ಪ ರೈಲು ಹತ್ತುವಾಗ ಪ್ರಯಾಣಿಕನೋರ್ವ ಸ್ಲಿಪ್ ಆಗಿ ಕೆಳಗೆ ಬಿದ್ದ ಘಟನೆ ನಡೆದಿದ್ದು ಈ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಪ್ರಯಾಣಿಕರು ಕೆಳಗೆ ಬೀಳುವುದನ್ನ ಗಮನಿಸಿದ ರೈಲ್ವೆ ಆರ್ ಪಿ ಎಫ್ ನ ಸಿಬ್ಬಂದಿ ಮಂಜುನಾಥ್ ಮತ್ತು ಅಣ್ಣಪ್ಪ ಅವರನ್ನ ರಕ್ಷಿಸಿದ್ದಾರೆ. ನಂತರ ಸಾರ್ವಜನಿಕರು ಸಹ ಸಿಬ್ವಂದಿಗಳ ಜೊತೆ ಕೈಜೋಡಿಸಿದ್ದಾರೆ. ಈ ವಿಡಿಯೋವನ್ನ ಟ್ವೀಟರ್ ನಲ್ಲಿ ಆರ್ ಪಿ ಎಫ್ ಮೈಸೂರು ವಿಭಾಗದ ರೈಲ್ವೆಯವರು ಪೋಸ್ಟ್ ಮಾಡಿದ್ದಾರೆ.
ನಿನ್ನೆ ಬೆಳಿಗ್ಗೆ ೧೧-೧೫ ಕ್ಕೆ ಶಿವಮೊಗ್ಗ ಬಿಡುವ ೧೬೨೨೧ ಕ್ರಮ ಸಂಖ್ಯೆಯ ರೈಲಿನಲ್ಲಿ ತನ್ನ ಕುಟುಂಬ ಸಮೇತ ಶಿವಮೊಗ್ಗದಿಂದ ಮೈಸೂರಿಗೆ ತೆರಳಬೇಕಿದ್ದ ದಿಲೀಪ್ ಕುಮಾರ್ ಘಾಟ್ಕೆ(೫೯) ಟಿಕೇಟ್ ಖರೀದಿಸಿ ರೈಲ್ವೆ ನಿಲ್ದಾಣದ ಅಂಗಡಿಯಿಂದ ತಿಂಡಿ ತರಲು ಹೋಗಿದ್ದು, ಖರೀದಿಸಿ ವಾಪಾಸ್ ಚಲಿಸುತ್ತಿದ್ದಾಗ ರೈಲನ್ನ ಹತ್ತಲು ಹೋಗಿ ಕಾಲು ಜಾರಿ ಕೆಳಗ ಬಿದ್ದಿದ್ದರು.
ಆದರೆ ಅದೃಷ್ಟವಶಾತ ಕೆಳಗೆ ಬಿದ್ದ ದಿಲೀಪ್ ಕುಮಾರ್ ಸೇಫ್ ಆಗಿದ್ದಾರು. ಇದನ್ನ ಗಮನಸಿದ ಆರ್ ಪಿ ಎಫ್ ಕಾನ್ ಸ್ಟೇಬಲ್ ಮಂಜುನಾಥ್ ಮತ್ತು ಅಣ್ಣಪ್ಪ ತಕ್ಷಣವೇ ಗಾರ್ಡ ಗೆ ಕರೆ ಮಾಡಿ ರೈಲನ್ನ ನಿಲ್ಲಿಸಿದ್ದಾರೆ.
ನಂತರ ಅವರನ್ನ ಫ್ಲಾಟ್ ಫಾರಂಗೆ ಎಳೆದುಕೊಂಡು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಅದೇ ರೈಲಿನಲ್ಲಿ ಮೈಸೂರಿಗೆ ಕಳುಹಿಸಲಾಗಿದೆ. ದಿಲೀಪ್ ಕುಮಾರ್ ರಾಜೇಂದ್ರ ನಗರದ ಶ್ರೀಧರ್ ನರ್ಸಿಂಗ್ ಹೋಂ ಬಳಿಯ ನಿವಾಸಿ ಎಂದು ತಿಳಿದುಬಂದಿದೆ. ಚಲಿಸುತ್ತಿರುವ ರೈಲನ್ನ ಹತ್ತದಂತೆ ಆರ್ ಪಿ ಎಫ್ ಪ್ರಯಾಣಿಕರಲ್ಲಿ ಮನವಿ ಮಾಡಿದೆ
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…