ಶಿವಮೊಗ್ಗ: ಶಿವಮೊಗ್ಗದಲ್ಲಿ ಫ್ಲೆಕ್ಸ್ ಹಾಕುವ ವಿಚಾರಕ್ಕೆ ನಡೆದಿದ್ದ ಗಲಾಟೆ ಪ್ರಕರಣದಿಂದ ಕೊನೆಗೂ ಪಾಲಿಕೆ ಎಚ್ಚೆತ್ತುಕೊಂಡಿದೆ. ನಗರದ ಹಲವೆಡೆಗಳಲ್ಲಿ ಹಾಕಿದ್ದ ಫ್ಲೆಕ್ಸ್ ಗಳನ್ನ ತೆರವು ಕಾರ್ಯಾಚರಣೆಗೆ ಕೈಹಾಕಿದೆ.
ಪಾಲಿಕೆಯ ಸುಮಾರು 80 ಮಂದಿ ಸಿಬ್ಬಂದಿಗಳಿಂದ ಫ್ಲೆಕ್ಸ್ ತೆರವು ಕಾರ್ಯಾಚರಣೆ ನಡೆದಿದೆ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆ ಮೇರೆಗೆ ಫ್ಲೆಕ್ಸ್ ತೆರವು ಕಾರ್ಯಾಚರಣೆ ನಡೆದಿದೆ.
ಸ್ಥಳದಲ್ಲಿ ನಿಂತು ಪಾಲಿಕೆ ಆಯುಕ್ತ ಮಾಯಣ್ಣಗೌಡ ಫ್ಲೆಕ್ಸ್ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ನಂತರ ಮಾತನಾಡಿದ ಪಾಲಿಕೆ ಆಯುಕ್ತ, ಸ್ವಾತಂತ್ರ್ಯೋತ್ಸವದ ಅಂಗವಾಗಿ ಫ್ಲೆಕ್ಸ್ ಗಳನ್ನ ಹಾಕಲು ಬಿಟ್ಟಿದ್ದೆವು. ಈಗ ಸ್ವಾತಂತ್ರ್ಯೋತ್ಸವ ಮುಗಿದಿದೆ. ಈ ಹಿನ್ನಲೆಯಲ್ಲಿ ಫ್ಲೆಕ್ಸ್ ತೆರವುಗೊಳಿಸಲಾಗಿದೆ ಎಂದರು.
ರಾತ್ರಿ ಇಡೀ ತೆರವುಗೊಳಿಸಲಾಗುವುದು. ಕೆಲವೆಡೆ ಬಾವುಟಗಳನ್ನ ಕೆಳಗಿಳಿಸಿಲ್ಲ. ಹಾಗಾಗಿ ನಿಯಮಾನುಸಾರ ಕೆಳಗಿಳಿಸಲಾಗುವುದು ಎಂದರು.