ಶಿವಮೊಗ್ಗ: ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಬಂಜಾರ ಸಮುದಾಯ ವಿರೋಧ ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆದಿದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರವಾದ ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪದಲ್ಲಿ ಸೋಮವಾರ ಆರಗ ಜ್ಞಾನೇಂದ್ರ ಪ್ರಚಾರಕ್ಕೆ ಹೋದಾಗ ಅಲ್ಲಿನ ಯುವಕರು ತಮ್ಮ ಸೇವಾಲಾಲ್ ಅವರ ಬಾವುಟ ಹಿಡಿದು ವಿರೋಧ ವ್ಯಕ್ತಪಡಿಸಿದ್ದಾರೆ. ತಾಂಡಾ ಬಚಾವೋ, ಬಿಜೆಪಿ ಹಠಾವೋ ಎಂದು ಘೋಷಣೆ ಕೂಗಿದ್ದಾರೆ.
ಗೃಹ ಸಚಿವರು ಸೋಮವಾರ ಮತ್ತೂರು ಹೋಬಳಿಯ ಗ್ರಾಮಗಳಲ್ಲಿ ತಮ್ಮ ಚುನಾವಣಾ ಪ್ರಚಾರಕ್ಕೆ ಹೋಗಿದ್ದಾರೆ. ಈ ವೇಳೆ ಮಂಡೇನಕೊಪ್ಪ ತಾಂಡಾಕ್ಕೆ ಹೋದಾಗ ಬಂಜಾರ ಯುವಕರು ಗೃಹ ಸಚಿವರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಒಳ ಮೀಸಲಾತಿ ವಿಚಾರದಲ್ಲಿ ತಮಗೆ ಇದ್ದ ಮೀಸಲಾತಿಯನ್ನು ಕಡಿತಗೊಳಿಸಿದ್ದು ಖಂಡನೀಯ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಗ್ರಾಮದಲ್ಲಿ ಪಾದಯಾತ್ರೆ ನಡೆಸದಂತೆ ತಡೆದಿದ್ದಾರೆ. ನಂತರ ಗೃಹ ಸಚಿವರು ಮುಂದಿನ ಗ್ರಾಮಕ್ಕೆ ಪ್ರಚಾರಕ್ಕೆ ತೆರಳಿದ್ದಾರೆ. ಕಳೆದ ವಾರ ಶಿಕಾರಿಪುರ ತಾಲೂಕು ತರಲಘಟ್ಟ ತಾಂಡಾದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಅವರು ಪ್ರಚಾರಕ್ಕೆ ಹೋದಾಗ ಇದೇ ರೀತಿ ಬಂಜಾರ ಯುವಕರು ವಿರೋಧ ವ್ಯಕ್ತಪಡಿಸಿದ್ದರು.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…