ಶಿವಮೊಗ್ಗ: ತಾಲೂಕಿನ ಆಯನೂರು ಹೋಬಳಿಯಿಂದ ಕಾಂಗ್ರೆಸ್ ಪಕ್ಷದ ಜನಾಕ್ರೋಶದ ಪಾದಯಾತ್ರೆ ಆರಂಭಗೊಂಡಿದೆ.
ಶರಾವತಿ ಮುಳುಗಡೆ ಸಂತ್ರಸ್ತರ ಡಿನೋಟಿಫಿಕೇಷನ್ ಹೈಕೋರ್ಟ್ ಕೇಂದ್ರ ಸರ್ಕಾರದ ಅನುಮತಿ ಪಡೆಯ ಬೇಕು ಎಂದು ಆದೇಶಿರುವುದು ರಾಜ್ಯ ಸರ್ಕಾರದ ನಿರ್ಲಕ್ಷದ ಹಿನ್ಬಲೆಯಲ್ಲಿ ಎಂದು ಆರೋಪಿಸಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆ ಆರಂಭಗೊಂಡಿದೆ.
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪಾದಯಾತ್ರೆ ನಡೆದಿದ್ದು,, ಪಾದಯಾತ್ರೆಗೆ ಚಾಲನೆಯನ್ನ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನೀಡಿದರು. ನಙತರ ಮಾಧ್ಯಮಗಳಿಗೆ ಮಾತನಾಡಿದ ನಧು ಬಂಗಾರಪ್ಪ
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಲೆನಾಡಿಗೆ ನೀಡಿದ ಸಹಕಾರಕ್ಕೆ ತದ್ವಿರುದ್ಧವಾಗಿ ಬಿಜೆಪಿ ಸರ್ಕಾರ ನಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಸರ್ಕಾರ ಮಲೆನಾಡಿಗರ ಬದುಕು ಕಟ್ಟಿಕೊಟ್ಟಿತ್ತು. ಬಿಜೆಪಿಯವರು ಅವರನ್ನು ಬೀದಿ ಪಾಲು ಮಾಡಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಡಿನೋಟಿಫೈ ಮಾಡಿದ ಜಾಗವನ್ನು ಬಿಜೆಪಿ ಸರ್ಕಾರ ನೋಟಿಫೈ ಮಾಡಿದೆ. ಕಾಂಗ್ರೆಸ್ ಸರ್ಕಾರ ಸಮಿತಿ ರಚಿಸಿ, ಚರ್ಚಿಸಿ ಹಕ್ಕುಪತ್ರ ನೀಡಿತ್ತು. ಆದರೆ ಬಿಜೆಪಿ ಸರ್ಕಾರ ಸಂತ್ರಸ್ತರಿಗೆ ಭೂಗಳ್ಳರು ಹಣೆಪಟ್ಟಿ ಹಾಕಿದೆ. ರೈತ ವಿರೋಧಿ ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಮುಂದಾಗಿದೆ. 94 ಸಿ, 94ಸಿಸಿ ಅರ್ಜಿ ವಿಲೇವಾರಿ ಆಗಬೇಕಿದೆ ಎಂದು ಆಗ್ರಹಿಸಿದರು.
ಆದರೆ ಆ ಯೋಜನೆಗಳನ್ನೇ ನೆಲಸಮ ಮಾಡಿದ್ದಾರೆ. ಅಡಕೆ ಸಂಶೋಧನೆ ಕೇಂದ್ರ ಸ್ಥಾಪನೆ ಮಾಡುವುದಾಗಿ ಅಮಿತ್ ಶಾ ಹೇಳಿದ್ದರು. ಸಂಶೋಧನೆ ಮಾಡಿದ್ದರಿಂದ ಎಲೆ ಚುಕ್ಕಿ ರೋಗ ಹೆಚ್ಚಳವಾಗಿದೆ. ಇದರ ಬಗ್ಗೆಯೂ ನ್ಯಾಯಕೊಡಿಸಬೇಕಿದೆ ಎಂದರು.
ಪಾದಯಾತ್ರೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಮಧು ಬಂಗಾರಪ್ಪ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಉಪಸ್ಥಿತರಿದ್ದರು.