News Karnataka Kannada
Monday, April 29 2024
ಶಿವಮೊಗ್ಗ

ಶಿವಮೊಗ್ಗ: ಮಾರಣಾಂತಿಕ ಹಲ್ಲೆ ಪ್ರಕರಣ, ಆರೋಪಿಗೆ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Court sentences accused to 4 years in jail in fatal assault case
Photo Credit : By Author

ಶಿವಮೊಗ್ಗ: ದಿನಾಂಕಃ- 21-03-2020 ರಂದು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಳಕೊಪ್ಪ ಟೌನ್ ನ ಮಠದ ಗದ್ದೆಯಲ್ಲಿ ಆರೋಪಿತನಾದ ಮಾಲತೇಶ ಕೆ ಈತನು ವೈಯಕ್ತಿಕ ದ್ವೇಶದ ಹಿನ್ನೆಲೆಯಲ್ಲಿ ಕೃಷ್ಣಪ್ಪ, (48 ವರ್ಷ)  ಈತನನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಕೈಯಲ್ಲಿದ್ದ ಕತ್ತಿಯಿಂದ ಕುತ್ತಿಗೆಗೆ ಮಾರಣಾಂತಿಕ ಹಲ್ಲೆ ಮಾಡಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಮಾರಣಾಂತಿಕ ಹಲ್ಲೆ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಆಗಿನ ತನಿಖಾಧಿಕಾರಿಗಳಾದ  ವಸಂತ್ ಪಿಎಸ್ಐ ರವರು ಪ್ರಕರಣದ ತನಿಖೆ ಪೂರೈಸಿ ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ  ಸುರೇಶ್ ಕುಮಾರ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು ಶ್ರೀ ಮಲ್ಲಿಕಾರ್ಜುನ ಗೌಡ ಮಾನ್ಯ ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ ರವರು ದಿನಾಂಕ 13-01-2023 ರಂದು ಆರೋಪಿ ಮಾಲತೇಶ ಕೆ, 34 ವರ್ಷ, ಮಠದ ಗದ್ದೆ ಶಿರಾಳಕೊಪ್ಪ ಟೌನ್ ಈತನ ವಿರುದ್ಧ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಿಗೆ 04 ವರ್ಷಗಳ ಕಾಲ ಸಾದಾ ಕಾರಾವಾಸ ಶಿಕ್ಷೆ ಮತ್ತು 10,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು