ಶಿವಮೊಗ್ಗ: ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ ಎಂಬ ಕಾರಣಕ್ಕೆ ಈ ಘಟನೆ ನಡೆದಿದೆ.
ಇವರಿಬ್ಬರೂ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು ಎಂದು ತಿಳಿದು ಬಂದಿದೆ. ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ಯುವಕ ಹಾಗೂ ಖಲಂದರ್ ನಗರದ ಮುಸ್ಲಿಂ ಯುವತಿ ಎನ್ನಲಾಗಿದ್ದು,ಮುಸ್ಲಿಂ ವಿದ್ಯಾರ್ಥಿನಿಯ ಸಹೋದರಿಗೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ವಿಷಯ ತಿಳಿದ ನಂತರ ಆಕೆ ತನ್ನ ಸಹಪಾಠಿ ಹಿಂದೂ ಯುವಕನ ಬೈಕ್ನಲ್ಲಿ ತನ್ನ ಮನೆಗೆ ಡ್ರಾಪ್ ಪಡೆದಿದ್ದಳು ಎಂಬ ಮಾಹಿತಿಯಿದೆ.
ಡ್ರಾಪ್ ನೀಡಿ ವಾಪಸ್ಸಾಗುತ್ತಿದ್ದ ವೇಳೆ ಝಂಡಾಕಟ್ಟೆ ಬಳಿ ಮುಸ್ಲಿಂ ಯುವಕರ ಗುಂಪು ಹಿಂದೂ ಯುವಕನನ್ನು ಅಡ್ಡ ಹಾಕಿದೆ. ನಿನ್ನ ಹೆಸರೇನು ಎಂದು ಪ್ರಶ್ನೆ ಮಾಡಿದೆ. ಆತ ಹೆಸರು ಹೇಳುತ್ತಿದ್ದ ಹಾಗೆಯೇ ಹತ್ತಾರು ಪ್ರಶ್ನೆ ಮಾಡಿ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ.ಈ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದು ಯುವಕನ ಇಬ್ಬರು ಸ್ನೇಹಿತರ ಮೇಲೆಯೂ ಗುಂಪು ಹಲ್ಲೆ ನಡೆಸಿದೆ ಎಂದು ತಿಳಿದು ಬಂದಿದೆ. ಈ ವೇಳೆ ಸ್ಥಳೀಯರು ಜಮಾಯಿಸಿದ್ದು, ಗಲಾಟೆ ಬಿಡಿಸಿ ಕಳುಹಿಸಿದ್ದಾರೆ. ಗಲಾಟೆ ಬಿಡಿಸಿದ ಸ್ಥಳೀಯರಿಗೂ ಮುಸ್ಲಿಂ ಯುವಕರ ಗುಂಪು ಬೆದರಿಕೆ ಹಾಕಿದೆ ಎನ್ನಲಾಗಿದ್ದು, ಘಟನೆ ಕುರಿತು ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…
ಬಾಕ್ಸ್ ಆಫೀಸ್ನಲ್ಲಿ ಇತಿಹಾಸ ಸೃಷ್ಟಿಸಿದ್ದ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಆ್ಯನಿಮೇಟೆಡ್ ಸೀರಿಸ್ ಬರುತ್ತಿದೆ. ಇದಕ್ಕೆ ‘ಬಾಹುಬಲಿ:…
ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…
ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…
ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ…
ಬಿಜೆಪಿ ನಿಮ್ಮನ್ನು ೫ಕೆಜಿ ರೇಷನ್ನಿನ ಮೇಲೆ ಅವಲಂಬಿತರನ್ನಾಗಿಸಲು ನೋಡುತ್ತಿದೆ. ನೀವು ಆತ್ಮನಿರ್ಭರರಾಗುವುದನ್ನು ಅವರು ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ…