ರಿಪ್ಪನ್ಪೇಟೆ: ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಳವಾರ ಘೋರ ಅನಾಹುತವೊಂದು ನಡೆದು ಹೋಗಿದೆ. ಗೃಹಿಣಿಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಜರುಗಿದೆ. ಕವನ (24) ಮೃತಪಟ್ಟ ಗೃಹಿಣಿ. ತೀರ್ಥಹಳ್ಳಿ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಮೃತ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ನಲ್ಲಿ ಕೆಲಸ ನಿರ್ವಹಿಸುತಿದ್ದರು.
ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಮೃತ ಕವನ ಅವರಿಗೆ ಐದು ವರ್ಷದ ಮಗನಿದ್ದು, ತಾಯಿ ಮನೆಯಲ್ಲಿ ಬಿಟ್ಟಿದ್ದಾರೆ. ಮಂಗಳವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.