ಶಿವಮೊಗ್ಗ: ದಿನಾಂಕ 18-11-2022 ರ ಶನಿವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಕೊಡಚಾದ್ರಿಯ ಸರ್ವಜ್ಞ ಪೀಠದಿಂದ – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವರೆಗೆ ಕೇಬಲ್ ಕಾರ್ ಅಳವಡಿಸಿವ ಕಾಮಗಾರಿಗೆ ಕೇಂದ್ರದ ಭೂ ಸಾರಿಗೆ ಮಂತ್ರಾಲಯದ ನ್ಯಾಷನಲ್ ಹೈವೇಸ್ ಲಾಜಿಸ್ಟಿಕ್ಸ್ ಮ್ಯಾನೇಜ್ಮೆಂಟ್ ಲಿಮಿಟೆಡ್ (ಎನ್ಎಚ್ಎಲ್ಎಂಎಲ್) ಅಧಿಕಾರಿಗಳ ತಂಡವು ಡಿಪಿಆರ್ ಮತ್ತು ಪತನ ನಕ್ಷೆಯನ್ನು ಅಂತಿಮಗೊಳಿಸಲು ಹಾಗೂ ಡಿಪಿಆರ್ ಅನುಮೋದನೆಗೆ ಇರುವ ತೊಡಕುಗಳ ಬಗ್ಗೆ ಅಭ್ಯಾಸ ಮಾಡಿ, ಪರಿಶೀಲಿಸುವ ನಿಟ್ಟಿನಲ್ಲಿ ಎರಡು ದಿನದ ಸರ್ವೇ ಕಾರ್ಯ ಮತ್ತು ಸ್ಥಳ ಪರಿಶೀಲನೆ ನೆಡೆಸಿದ್ದಾರೆ.
ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ ಸಮಸ್ಯೆಯ ಕುರಿತು ದಿನಾಂಕ 19-11-2022 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ ರಾಘವೇಂದ್ರ ಅವರೊಂದಿಗೆ ಚರ್ಚಿಸಿದ್ದು. ” ಕೇಂದ್ರದ ಪರ್ವತ ಮಾಲಾ ಅಡಿಯಲ್ಲಿ ಬರುವ ನೂತನ ಕೇಬಲ್ ಕಾರ್ ಯೋಜನೆಯು ಶೀಘ್ರ ಅಳವಡಿಸುವ ಕಾರ್ಯ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ”.
ಕೊಡಚಾದ್ರಿಯಿಂದ ಕೊಲ್ಲೂರಿನವರೆಗೆ ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ ತೊಡಕುಗಳನ್ನು ಪರಿಹರಿಸಲು ಪ್ರವಾಸೋಧ್ಯಮ ಇಲಾಖೆ, ಅರಣ್ಯ ಇಲಾಖೆ, ರಾಷ್ಟೀಯ ಹೆದ್ದಾರಿ ಅಧಿಕಾರಿಗಳ ಜೊತೆಗೆ ಸೇರಿ ಪರಿಹರಿಸಿ, ಕನಿಷ್ಠ ಒಂದು ತಿಂಗಳ ಅವಧಿಯಲ್ಲಿ ಡಿಪಿಆರ್ ಮಂಜೂರಾತಿ ಪಡೆಯುವುದಾಗಿ ತಿಳಿಸಿರುತ್ತಾರೆ.
ಈ ಸಂದರ್ಭದಲ್ಲಿ ಎನ್ಎಚ್ಎಲ್ಎಂಎಲ್ ದೆಹಲಿಯ ಹಿರಿಯ ಮ್ಯಾನೇಜರ್ ಅನುರಾಗ್ ತ್ರಿಪಾಟಿ, ಎನ್ಎಚ್ಎಲ್ಎಂಎಲ್ ಬೆಂಗಳೂರು ಮ್ಯಾನೇಜರ್ ರೀನಾ ಪವಾರ್, ರಾಷ್ಟ್ರೀಯ ಹೆದ್ದಾರಿ ಇಲಾಖೆ ಶಿವಮೊಗ್ಗದ ಪೀರ್ ಪಾಷಾ, ಡಿಪಿಆರ್ ಕನ್ಸಲ್ಟೆಂಟ್ ಶ್ರವಣ ಕುಮಾರ್, ಪ್ರವಾಸೋಧ್ಯಮ ಇಲಾಖೆಯ ಗುರುಪ್ರಸಾದ್, ವೆಂಕಟೇಶ್ ಕಿಣಿ, ಶಿವಕುಮಾರ್ ವನ್ಯಜೀವಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಾಹಿತಿ :
ಸಂಸದರ ಕಾರ್ಯಾಲಯ.
ಶಿವಮೊಗ್ಗ