News Karnataka Kannada
Sunday, April 28 2024
ಶಿವಮೊಗ್ಗ

ಶಿವಮೊಗ್ಗ: ಕೆಎಸ್ಆರ್ ಟಿ ಸಿ ಬಸ್ ಸೌಕರ್ಯ ಒದಗಿಸುವಂತೆ ಪ್ರತಿಭಟನೆ

KSRTC demands bus facility
Photo Credit : By Author

ಶಿವಮೊಗ್ಗ: ಗ್ರಾಮಾಂತರ ಪ್ರದೇಶಗಳು ಈಗ ಶೈಕ್ಷಣಿಕ ಹಬ್ ಆಗುತ್ತಿದ್ದು ಈ ಭಾಗಕ್ಕೆ ಸೂಕ್ತ ಕೆಎಸ್ಆರ್ ಟಿ ಸಿ ಬಸ್ ಸೌಕರ್ಯ ಒದಗಿಸುವಂತೆ ಎನ್ ಎಸ್ ಐ ಗ್ರಾಮಾಂತರ ಘಟಕ ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿತು.

ಶಿವಮೊಗ್ಗದಿಂದ ನೂರಾರು ವಿದ್ಯಾರ್ಥಿಗಳು ಶಂಕರಘಟ್ಟದ ಕುವೆಂಪು ವಿವಿಗೆ ಹೋಗುತ್ತಾರೆ. ಅದರೆ, ಇಲ್ಲಿಗೆ ಕೇವಲ ಒಂದು ಕೆಎಸ್ ಆರ್ ಟಿ ಸಿ ಬಸ್ ಮಾತ್ರ ಸಂಚರಿಸುತ್ತಿದೆ. ಶಿವಮೊಗ್ಗದ ಸುತ್ತಮುತ್ತಲ ಹಲವಾರು ಪ್ರದೇಶಗಳಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ವ್ಯವಸ್ಥೆ ಇಲ್ಲದೇ ಇರುವುದರಿಂದ ಗ್ರಾಮೀಣ ವಿದ್ಯಾರ್ಥಿಗಳು ದುಬಾರಿ ಪ್ರಯಾಣ ದರ ಭರಿಸಬೇಕಾಗುತ್ತಿದೆ. ಸರ್ಕಾರ ಗ್ರಾಮೀಣ ವಿದ್ಯಾರ್ಥಿಗಳಿಗೆಂದೇ ರೂಪಿಸಿರುವ ಬಸ್‍ಪಾಸ್ ಸೌಲಭ್ಯ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ಪದರತಿಭಟನಾ ಕಾರರು ಆಗ್ರಹಿಸಿದರು.

ಇನ್ನು ಸಾಗರ ರಸ್ತೆಯಲ್ಲಿ ಸಂಚರಿಸುವ ಬಸ್‍ಗಳು ವಾಜಪೇಯಿ ಬಡಾವಣೆಯ ವಿದ್ಯಾರ್ಥಿ ನಿಲಯದ ಬಳಿ ನಿಲುಗಡೆ ಮಾಡುತ್ತಿಲ್ಲ. ಇದರಿಂದಾಗಿ ಈ ಭಾಗದಿಂದ ಬರುವ ವಿದ್ಯಾರ್ಥಿಗಳು ಶಿವಮೊಗ್ಗ ಬಸ್ ನಿಲ್ದಾಣಕ್ಕೆ ಬಂದು ಮತ್ತೆ ಆಟೋ ಇಲ್ಲವೇ ಖಾಸಗಿ ಬಸ್‍ಗಳ ಮೂಲಕ ವಿದ್ಯಾರ್ಥಿ ನಿಲಯಕ್ಕೆ ಹೋಗಬೇಕಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಹಣ – ಸಮಯ ವ್ಯರ್ಥವಾಗುತ್ತಿದೆ ಎಂದು ಆರೋಪಿಸಲಾಗಿದೆ.

ಕೂಡಲೇ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳ ಬೇಡಿಕೆಗನುಗುಣವಾಗಿ ಕೆಎಸ್ಆರ್ ಟಿಸಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿ ನಿಲಯಗಳು, ಶಾಲಾ ಕಾಲೇಜುಗಳ ಬಳಿ ಬಸ್‍ಗಳ ನಿಲುಗಡೆಗೊಳಿಸಲು ಸೂಕ್ತ ಆದೇಶ ಮಾಡಬೇಕು ಎಂದು ಈ ಮೂಲಕ ಆಗ್ರಹಿಸುತ್ತಿದ್ದೇವೆ.
ಪರೀಕ್ಷಾ ಸಮಯ ಹತ್ತಿರವಾಗುತ್ತಿದ್ದು, ಬಸ್ ಸೌಕರ್ಯ ಸಿಗದೇ ವಿದ್ಯಾರ್ಥಿಗಳು ತೊಂದರೆಗೀಡಾಗುತ್ತಿದ್ದಾರೆ. ಕೂಡಲೇ ಬಸ್ ವ್ಯವಸ್ಥೆ ಮಾಡಬೇಕು. ಇಲ್ಲವಾದಲ್ಲಿ ಎನ್.ಎಸ್.ಯು.ಐ. ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಲಾಯಿತು.

ಈ ಸಂದರ್ಭದಲ್ಲಿ ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ವಿಜಯಕುಮಾರ್, ಕಾರ್ಯಧ್ಯಕ್ಷ ರವಿಕಾಟಿಕೆರೆ, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಚರಣ್ ,ವಿಕ್ರಂ ,ರವಿ ,ಅಜಯ್ ಅರಸ್ ,ವರುಣ್ ವಿ ಪಂಡಿತ್, ಕುಮಾರ್, ಅಶ್ವಥ್ ,ತೌಫಿಕ್, ಮಲಗೊಪ್ಪ ಶಿವು, ಗಿರಿ ,ಮುರುಳಿ, ರೋಹನ್ ,ಕಿರಣ ,ಇನ್ನು ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು