News Karnataka Kannada
Friday, May 03 2024
ಶಿವಮೊಗ್ಗ

ಶಿವಮೊಗ್ಗ: ವರದಕ್ಷಿಣೆ ಕಿರುಕುಳ, ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Newly-wed woman commits suicide by hanging herself over dowry harassment
Photo Credit : By Author

ಶಿವಮೊಗ್ಗ: ವರದಕ್ಷಿಣೆ ಕಿರುಕುಳ ಹಿನ್ನಲೆಯಲ್ಲಿ ನವವಿವಾಹಿತೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ವಿವಾಹಿತೆಯ ತಂದೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದೇ ವರ್ಷ ಮೇ ತಿಂಗಳಲ್ಲಿ ದಿಗೇಟಿಕೊಪ್ಪದ ಈಶ್ವರ ಎಂಬುವರೊಂದಿಗೆ ಸೊರಬದ ಹೊಸಬಾಳೆ ಗ್ರಾಮದ ಯವತಿ ಸುಶ್ಮಿತಾಳನ್ನ(23) ಕೊಟ್ಟು ಮದುವೆ ಮಾಡಲಾಗಿತ್ತು. ಮದುವೆ ಆಗಿ ಏಳು ತಿಂಗಳು ಕಳೆಯುವ ಒಳಗೆ ನವವಿವಾಹಿತೆ ನೇಣುಬಿಗಿದು ಕೊಂಡು ಸಾವನ್ನಪ್ಪಿದ್ದಾಳೆ.

ಮಗಳ ಸಾವಿಗೆ ಗಂಡನಮನೆಯವರ ವರದಕ್ಷಿಣೆ ಕಿರುಕುಳವೇ ಕಾರಣವೆಂದು ಗೃಹಿಣಿಯ ತಂದೆ ಹನುಮಂತಪ್ಪ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತವರು ಮನೆಯಿಂದ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಗಂಡ ಈಶ್ವರ ಮತ್ತು ತಾಯಿ ಮಂಜಮ್ಮ ಮದುವೆಯ ಹೊಸದರಲ್ಲಿಯೇ ಪೀಡಿಸುತ್ತಿದ್ದು ಮಗಳು ಈ ಬಗ್ಗೆ ಹೇಳಿದ್ದಳು ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ಗಂಡ ಈಶ್ವರ ಮತ್ತು ಅತ್ತೆ ಮಂಜಮ್ಮನವರನ್ನ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಮಗಳ ಆತ್ಮಹತ್ಯೆಯನ್ನ ಗಂಡನ ಮನೆಯವರು ಕರೆ ಮಾಡಿ ತಿಳಿಸದೆ, ಬೇರೆಯವರ ಮೂಲಕ ತಿಳಿಯಲ್ಪಟ್ಟಿರುತ್ತದೆ ಎಂದು ತಂದೆ ಹನುಮಂತಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಗೆ ಹೋದ ಮೇಲೆ ನಮಗೆ ಮಗಳ ಸಾವು ತಿಳಿದಿರುವುದಾಗಿ ಹೇಳಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು