ಶಿವಮೊಗ್ಗ: ಪ್ರಕರಣ ವಾಪಾಸ್ ಪಡೆಯುವಂತೆ ಒತ್ತಾಯಿಸಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದ ಸಂಬಂಧಿಸಿದಂತೆ ಆರೋಪಿ ಪ್ರವೀಣ ಯಾನೆ ಮೋಟು ಎಂಬಾತನನ್ನ ಬಂಧಿಸಲು ಕುಂಸಿಯ ವೀರಣ್ಣನಬೆನವಳ್ಳಿ ಗ್ರಾಮದಲ್ಲಿ ಬಂಧಿಸಲು ಹೋದ ಗ್ರಾಮಾಂತರ ಪೊಲೀಸರ ಮೇಲೆ ಆರೋಪಿ ಪ್ರವೀಣ್ ದಾಳಿ ನಡೆಸಿದ್ದಾನೆ.
ಗ್ರಾಮಾಂತರ ಪೊಲೀಸ್ ಠಾಣೆಯ ಪಿಸಿ ಶಿವರಾಜ್ ಪ್ರವೀಣನನ್ನ ಹಿಡಿಯಲು ಹೋದಾಗ ದಾಳಿ ನಡೆಸಿದ್ದಾನೆ. ಮಾರಕಾಸ್ತ್ರಗಳಿಂದ ದಾಳಿ ನಡೆಸಲು ಮುಂದಾದಾಗ ಪಿಎಸ್ಐ ರಮೇಶ್ ದಾಳಿ ನಡೆಸದಂತೆ ಎಚ್ಚರಿಸಿದ್ದಾರೆ. ಎಚ್ಚರಿಕೆಯನ್ನ ದಿಕ್ಕರಿಸಿ ಆರೋಪಿ ದಾಳಿ ಮಾಡಲು ಯತ್ನಿಸಿದ್ದಾನೆ.
ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ. ಡಿ. 17 ರಂದು ಜೈಲ್ ರಸ್ತೆಯ ವನಜಾಕ್ಷಿ ಎಂಬುವರಿಗೆ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯ ಮುಂದೆ ನಿಲ್ಲಿಸಿದ್ದ ಐ 20 ಕಾರಿಗೆ ಬೆಂಕಿ ಹಚ್ಚಿದ್ದನು. ಈ ಪ್ರಕರಣವನ್ನ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಮೂರು ತಿಂಗಳ ಹಿಂದೆ ಶಿವಮೊಗ್ಗದ ಜೈಲ್ ರಸ್ತೆಯಲ್ಲಿ ವನಜಾಕ್ಷಮ್ಮ ಎಂಬುವರನ್ನ ಕೊಲೆ ಯತ್ನ ಪ್ರಕರಣದಲ್ಲಿ ಅಂದರ್ ಆಗಿದ್ದ ಪ್ರವೀಣ ಕೇಸ್ ವಾಪಾಸ್ ಪಡೆಯುವಂತೆ ಬೆದರಿಕೆ ಹಾಕಿದ್ದನು. ಮೂರು ತಿಂಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದ ಪ್ರವೀಣ ಇಂದು ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದಾನೆ.
ದಾಳಿಯಲ್ಲಿ ಪೊಲೀಸ್ ಶಿವರಾಜು ಅವರಿಗೂ ಗಾಯಗಳಾಗಿವೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನೂ ಮೆಗ್ಗಾನ್ ಗೆ ದಾಖಲಿಸಲಾಗಿದೆ.