ಶಿವಮೊಗ್ಗ: ನಗರದಲ್ಲಿ ಮತ್ತೆ ಸಾವರ್ಕರ್ ಫೋಟೊ ವಿವಾದ ಭುಗಿಲೆದ್ದಿದೆ. ಕಿಡಿಗೇಡಿಗಳು ಸರ್ಕಲ್’ನಲ್ಲಿ ಕಟ್ಟಿದ್ದ ಪ್ಲೆಕ್ಸ್ ತೆಗೆದಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಅಮೀರ್ ಅಹಮದ್ ಸರ್ಕಲ್ನಲ್ಲಿ ವಿ.ಡಿ.ಸಾವರ್ಕರ್ ಅವರ ಫೋಟೊ ಕಟ್ಟಲಾಗಿತ್ತು. ಮುಸ್ಲಿಂ ಸಮುದಾಯದ ಯುವಕರ ಗುಂಪೊಂದು ಸಾವರ್ಕರ್ ಫೋಟೊ ಕಟ್ಟಿರುವ ಜಾಗದಲ್ಲಿ ಟಿಪ್ಪುಸುಲ್ತಾನ್ ಫೋಟೊ ಹಾಕಲು ಮುಂದಾಯಿತು. ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಲುಪಿದೆ ಎಂದು ತಿಳಿದು ಬಂದಿದೆ.
ಫೋಟೊ ಕಿತ್ತವರಿಗೆ ಲಾಠಿ ಏಟು
ಅಮೀರ್ ಅಹಮದ್ ಸರ್ಕಲ್’ನಲ್ಲಿ ವಿ.ಡಿ.ಸಾವರ್ಕರ್ ಅವರ ಪ್ಲೆಕ್ಸ್ ಇದ್ದಲ್ಲಿ ಟಿಪ್ಪುಸುಲ್ತಾನ್ ಅವರ ಫೋಟೊ ಕಟ್ಟಲು ಮುಸ್ಲಿಂ ಸಮುದಾಯದ ಯುವಕರು ಮುಂದಾಗಿದ್ದಾರೆ. ಪೊಲೀಸರು ಯುವಕರನ್ನು ತಡೆದಿದ್ದಾರೆ. ಈ ವೇಳೆ ಸರ್ಕಲ್’ಗೆ ನುಗ್ಗಿದ ಕಿಡಿಗೇಡಿಗಳು ವಿ.ಡಿ.ಸಾವರ್ಕರ್ ಅವರ ಪ್ಲೆಕ್ಸ್ ತೆರವು ಮಾಡಿದ್ದಾರೆ. ಕೂಡಲೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ, ಪ್ಲೆಕ್ಸ್ ಕಿತ್ತವರನ್ನು ವಶಕ್ಕೆ ಪಡೆದಿದ್ದಾರೆ.
ಮತ್ತೆ ಪ್ಲೆಕ್ಸ್ ಕಟ್ಟುವ ಯತ್ನ
ಇತ್ತ ವಿ.ಡಿ.ಸಾವರ್ಕರ್ ಫೋಟೋ ತೆಗೆದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಲ್’ನಲ್ಲೆ ಪ್ಲೆಕ್ಸ್ ಕಟ್ಟಬೇಕು ಎಂದು ಪಟ್ಟು ಹಿಡಿದರು. ಆದರೆ ಇದಕ್ಕೆ ಪೊಲೀಸರು ಅವಕಾಶ ಕೊಡದಿದ್ದಾಗ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಸಾವರ್ಕರ್ ಪ್ಲೆಕ್ಸನ್ನು ಪೊಲೀಸರು ವಶಕ್ಕೆ ಪಡೆದರು. ಆಕ್ರೋಶಗೊಂಡ ಹಿಂದೂ ಸಂಘಟನೆ ಕಾರ್ಯಕರ್ತರು ಅಮೀರ್ ಅಹಮದ್ ಸರ್ಕಲ್’ನಲ್ಲಿ ಧರಣಿ ಆರಂಭಿಸಿದರು.
ಸದ್ಯ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…