ಶಿವಮೊಗ್ಗ ಡಿ.14: ಡಿ.14 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇವರು ಸಿಎಸ್ಆರ್ ಚಟುವಟಿಕೆ ಅಡಿಯಲ್ಲಿ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮಕ್ಕೆ ಕ್ಷಯ ರೋಗಿಗಳ ಶೀಘ್ರ ಪತ್ತೆ ಮತ್ತು ಚಿಕಿತ್ಸೆಗಾಗಿ ಆಧುನಿಕ ಯಂತ್ರವಾದ ಟ್ರೂನ್ಯಾಟ್ ಯಂತ್ರವನ್ನು ಕೊಡುಗೆಯಾಗಿ ನೀಡಿದರು.
ಎಸ್ಬಿಐ ಡೆಪ್ಯೂಟಿ ಜನರಲ್ ಮ್ಯಾನೇಜರ್ ಜೋಬಿ ಜೋಶ್ ಹಾಗೂ ಶಿವಮೊಗ್ಗ ವಿಭಾಗದ ರೀಜನಲ್ ಮ್ಯಾನೇಜರ್ ಶ್ರೀಜಿತ್ ಇವರು ಟಿಬಿ ಮುಕ್ತ ಭಾರತ ಮಾಡುವ ಉದ್ದೇಶದಿಂದ ಟಿಬಿ ರೋಗಿಗಳ ಶೀಘ್ರ ಪತ್ತೆ ಮತ್ತು ಚಿಕಿತ್ಸೆಗಾಗಿ ಈ ಆಧುನಿಕ ಯಂತ್ರವನ್ನು ನೀಡಿದರು.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ, ಇಂತಹ ಕಾರ್ಯಕ್ರಮವನ್ನು ಅಧಿಕಾರಿಗಳು ಮಾಡುತ್ತಿರುವುದು ಪವಿತ್ರವಾದ ಕರ್ತವ್ಯವೆಂದು ಹೇಳಿದರು.
ಆರ್ ಸಿ ಹೆಚ್ಓ ಡಾ. ನಾಗರಾಜ್ ನಾಯಕ್, ಡಿ ಟಿ ಓ ಡಾ. ದಿನೇಶ್ ಜಿ ಸಿ, ಡಾ. ಗುಡದಪ್ಪ ಕಸಬಿ, ಸಿಡಿಪಿಓ ಚಂದ್ರಪ್ಪ ಹಾಗೂ ಎಸ್ ಬಿ ಐ ನ ವ್ಯವಸ್ಥಾಪಕರಾದ ನಿಶಾಂತ್ ಗೌರವ್ ಉಪಸ್ಥಿತರಿದ್ದರು.
ತ್ರಿವಳಿ ತಲಾಖ್ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…
ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…