News Karnataka Kannada
Monday, April 29 2024
ಶಿವಮೊಗ್ಗ

ಶಿವಮೊಗ್ಗ: ಮಾಂಗಲ್ಯ ಸರ ಕಳವು ಮಾಡಿದ್ದ ಮಹಿಳೆಯ ಬಂಧನ

Shiva
Photo Credit : By Author

 ಶಿವಮೊಗ್ಗ: ಮಲಬಾರ್ ಗೋಲ್ಡ್ ಅಂಡ್ ಡೈಮೆಂಡ್ ಅಂಗಡಿಗೆ ಗ್ರಾಹಕಿಯಂತೆ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಮಹಿಳೆಯನ್ನ ಬಂದಿಸುವಲ್ಲಿ ದೊಡ್ಡಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳ್ಳತನವನ್ನೆ ತನ್ನ ಕಸುಬನ್ನಾಗಿ ಮಾಡಿಕೊಂಡಿದ್ದ ವಿಜಯಪುರ ಜಿಲ್ಲೆಯ ಚಿರಸ್ತಹಳ್ಳಿ ಗ್ರಾಮದ ಗುಂಡಗತ್ತಿ ರಸ್ತೆಯ ಹರಪ್ಪನಹಳ್ಳಿ ತಾಲೂಕಿನ ಆರೋಪಿ ರತ್ನ ಟಿ ಕೋಮ್ ಗೋಣಿಪ್ಪ @ ಗೋಣಿ ಬಸಪ್ಪ ಎಂಬ ಮಹಿಳೆಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ.

ಈ ಮಹಿಳೆ ಕಳೆದ 24.11.2022 ಶಿವಮೊಗ್ಗದ ಬಿ.ಹೆಚ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಹೋಗಿ ಅಂಗಡಿಯ ಕೌಂಟರ್ನಲ್ಲಿದ್ದ ಪವಿತ್ರ ಎಂಬ ಯುವತಿಯ ಗಮನ ಬೇರೆಡೆ ಸೆಳೆದು 60,000 ಮೌಲ್ಯದ 10 ಗ್ರಾಂ 938 ಮಿಲಿ ತೂಕದ ಮಾಂಗಲ್ಯ ಸರವನ್ನು ಎಗುರಿಸಿ ನಕಲಿ ಮಾಂಗಲ್ಯ ಸರವನ್ನು ಆ ಸ್ಥಳದಲ್ಲಿಟ್ಟು ಪರಾರಿ ಆಗಿದ್ದಳು.

ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಪ್ರಕರಣದ ಬೆನ್ನತ್ತಿದ ಪೊಲೀಸರಿಗೆ ಈ ಹಿಂದೆ ಸುಲ್ತಾನ್ ಗೋಲ್ಡಅಂಡ್ ಡೈಮಂಡ್ ಅಂಗಡಿಯಲ್ಲಿ ಆಭರಣ ಕಳ್ಳತನವಾಗಿದ್ದು ಎರಡನ್ನು ಒರೆಹಚ್ಚಿದ ಪೊಲೀಸರು ಚಾಲಾಕಿ ಮಹಿಳೆಯನ್ನ ಬಂಧಿಸಿದ್ದಾರೆ.

ಇಡೀ ಪ್ರಕರಣದ ಸುತ್ತ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿ.ಐ ಅಂಜನಕುಮಾರ್ ನೇತೃತ್ವದಲ್ಲಿ ಮಹಿಳಾ ಪಿ.ಎಸ್.ಐ ಮಂಜಮ್ಮ. ಎ. ಎಸ್ . ಐ . ಚಂದ್ರಶೇಖರ H C ಗಳಾದ ಪಾಲಾಕ್ಷ ನಾಯ್ಕ್., ಶಶಿಧರ್. ಪಿ.ಸಿ ಗಳಾದ ಗುರು ನಾಯ್ಕ್. ಚಂದ್ರ ನಾಯ್ಕ್, ಮನೋಹರ್. ಮಹಿಳಾ ಪಿ ಸಿ ಯಾದ ಪೂಜಾರವರು ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು