ಶಿವಮೊಗ್ಗ: ಭದ್ರಾವತಿ ತಾಲ್ಲೂಕು ಮಸರಹಳ್ಳಿ ಬಳಿ ದುರಂತ ಸಂಭವಿಸಿದೆ. ರೈಲ್ವೆ ಹಳಿ ಸಮೀಪ ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಮಹಿಳೆಗೆ ರೈಲು ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತಪಟ್ಟ ಮಹಿಳೆ ರೈಲು ಬರುವ ವೇಳೆಯಲ್ಲಿ ತನ್ನ ಮಗನ ಜೊತೆಯಲ್ಲಿ ಮೊಬೈಲ್ ನಲ್ಲಿ ಮಾತಾಡುತ್ತಿದ್ದು, ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಅವರಿಗೆ ರೈಲು ಬರುವುದು ಗಮನಕ್ಕೆ ಬಂದಿಲ್ಲ. ತಲೆಗೆ ರೈಲು ಬಡಿದು ಸ್ಥಳದಲ್ಲಿಯೇ ಮಹಿಳೆ ಮೃತಪಟ್ಟಿದ್ದಾರೆ.
ಮಹಿಳೆ ಮೃತಪಟ್ಟ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.