ಶಿವಮೊಗ್ಗ: ವಧು ಅನ್ವೇಷಣೆಯಲ್ಲಿ ತೊಡಗಿದ ಭೂಪನೊಬ್ಬ ಶಿವಮೊಗ್ಗ ಎಸ್ಪಿಗೆ ವಧು ಹುಡುಕಿ ಕೊಡಿ ಅಂತ ಪತ್ರ ಬರೆದಿದ್ದಾನೆ.
ಭದ್ರಾವತಿ ಮೂಲದ ಪ್ರವೀಣ ಓ.ಎಸ್ ಎಂಬಾತ ಎಸ್ಪಿಗೆ ಪತ್ರ ಬರೆದಿದ್ದು ಈ ಪತ್ರ ಜಾಲತಾಣದಲ್ಲಿ ಭರ್ಜರಿ ವೈರಲ್ ಆಗಿದೆ.
ನಾನು ಭದ್ರಾವತಿ ನಗರದಲ್ಲಿ ಜನಿಸಿರುತ್ತೇನೆ. ನಾನು ಗೊಲ್ಲ ಸಮುದಾಯಕ್ಕೆ ಸೇರಿದ್ದು, ನನ್ನ ತಂದೆ ಇತ್ತೀಚೆಗೆ ನಿಧನರಾಗಿದ್ದಾರೆ. ಅಣ್ಣ ಕೂಡ ಮದ್ವೆಯಾಗಿದ್ದಾನೆ. ನಾನು ಈ ಹಿಂದೆ ಸಾಫ್ಟ್ವೇರ್ ಕಂಪನಿಯಲ್ಲಿ ಅಧ್ಯಾಪಕನಾಗಿದ್ದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲೂ ಕೆಲಸ ಮಾಡಿದ್ದೆ. ಇದೀಗ ಊರಲ್ಲಿ ವ್ಯವಸಾಯ ಮಾಡ್ಕೊಂಡು ಓಡಾಡ್ಕೊಂಡಿದ್ದೇನೆ. ವಯಸ್ಸು ಮಿತಿ ಮೀರಿರೋದ್ರಿಂದ ಪ್ರವೀಣಣ್ಣಂಗೆ ಜೀವನದಲ್ಲಿ ಜಿಗುಪ್ಸೆ ಬಂದುಬಿಟ್ಟಿದೆ.
ವಧು ಅನ್ವೇಷಣೆಯಲ್ಲಿ ಯಾವುದೂ ಸರಿ ಹೊಂದುತ್ತಿಲ್ಲ. ಹೀಗಾಗಿ ಗೊಲ್ಲ ಸಮುದಾಯದ ಹುಡುಗಿಯನ್ನು ಹುಡುಕಿಕೊಡಿ’ ಎಂದು ಪತ್ರ ಬರೆದಿದ್ದಾನೆ. ಈ ಪತ್ರ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ತರಹೇವಾರಿ ಕಮೆಂಟ್ಗಳೂ ಬಂದಿವೆ.
ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…
ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ…
ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…
ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…