ಶಿವಮೊಗ್ಗ : ಮಹಿಳಾ ಕೇಂದ್ರ ಕಾರಾಗೃಹ ಶಿವಮೊಗ್ಗ ಇಲ್ಲಿ ಇಂದು ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಆಚರಣೆ ಮತ್ತು ವಯಸ್ಕರ ಶಿಕ್ಷಣ 2ನೇ ಹಂತದ ಸಾಕ್ಷರತಾ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜಣ್ಣ ಸಂಕಣ್ಣನವರ್ ಇವರು ಉದ್ಘಾಟಿಸಿ, ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಂಧಿಗಳಿಗೆ ಕಲಿಕೋಪಕರಣಗಳನ್ನು ವಿತರಿಸಲಾಯಿತು. ಹಾಗೂ ಬಂಧಿಗಳಿಂದ ಗಾಂಧಿ ವಿಚಾರಗಳ ಕುರಿತು ಪ್ರಶ್ನೋತ್ತರ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.
ಕಾರಾಗೃಹದ ಮುಖ್ಯ ಅಧೀಕ್ಷಕರಾದ ಡಾ.ಅನಿತಾ, ಅಧೀಕ್ಷಕಿ ಹೇಮಾವತಿ.ಜಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಜಯಪ್ಪ ಜಿ.ಬಿ, ಕಾರ್ಯಕ್ರಮ ಸಂಯೋಜಕ ಪಾಟಿಲ್ ಹೆಚ್ ಎಸ್, ಜೈಲರ್ ಸವಿತಾ ಬೆಳ್ಳುಂಡಗಿ ಹಾಗೂ ಇತರರು ಉಪಸ್ಥಿತರಿದ್ದರು.