ಸಂಘಟಿತರಾದರೆ ಮಾತ್ರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ: ಎಚ್.ಟಿ.ಮೋಹನ್ ಕುಮಾರ್

ಮೂಡಿಗೆರೆ:  ಕಾಫಿ ಬೆಳಗಾರರು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ಎಲ್ಲ ಸವಾಲುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕಾದರೆ ಬೆಳಗಾರರು ಸಂಘಟಿತರಾಗಬೇಕೆಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಚ್.ಟಿ.ಮೋಹನ್ ಕುಮಾರ್ ಕರೆ ನೀಡಿದರು.

ಅವರು ಮೂಡಿಗೆರೆ ಪ್ಲಾಂಟರ್ಸ್ ಕ್ಲಬ್ ಆವರಣದಲ್ಲಿ ಬೆಳಗಾರರ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ ಕರ್ನಾಟಕ ಬೆಳೆಗಾರರ ಒಕ್ಕೂಟದ ೨೫ನೇ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಕಾಫಿ ಬೆಳೆಗಾರರ ನೆರವಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ, ರಾಷ್ಟ್ರದ ವಿದೇಶಿ ವಿನಿಮಯದಲ್ಲಿ ಕಾಫಿ ಬೆಳಗಾರರ ಪಾತ್ರ ಪ್ರಮುಖವಾಗಿದೆ. ಇಂದು ಪ್ರಾಕೃತಿಕ ವಿಕೋಪ, ಮಾರುಕಟ್ಟೆ ಏರಿಳಿತ, ಕಾಫಿ ಉತ್ಪಾದನಾ ವೆಚ್ಚದ ಹೆಚ್ಚಳದಿಂದ ಬೆಳೆಗಾರರು ತೀವ್ರ ನಷ್ಟವನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಕಾಫಿ ಬೆಳೆಗಾರರಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಆಗ್ರಹಿಸಿದರು.

ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ ಮಾತನಾಡಿ, ಸರಕಾರಿ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ಬೆಳೆಗಾರರಿಗೆ ನೀಡುವ ಕಾಯ್ದೆ ಈ ಹಿಂದಿನ ಸರಕಾರದ ಅವಧಿಯಲ್ಲಿ ಅನುಮೋದನೆ ದೊರೆತಿದೆ. ಇದೀಗ ಇದರ ಅನುಷ್ಠಾನದ ವಿಚಾರವಾಗಿ ವಿಶೇಷವಾಗಿ ಅರಣ್ಯ ಮತ್ತು ಕಂದಾಯ ಭೂಮಿ ವಿಷಯದಲ್ಲಿ ಇರುವ ತಡೆಯನ್ನು ಸರಕಾರ ನಿವಾರಿಸಬೇಕು. ಕಾಫಿ ಬೆಳಗಾರರಿಗೆ ೧೦ ಎಚ್.ಪಿ. ವರೆಗಿನ ವಿದ್ಯುತ್, ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುವ ಜತೆಗೆ ಕಾಡಾನೆ ಮತ್ತು ಮಾನವ ಸಂಘರ್ಷದ ವಿಷಯದಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದ ಎಂದು ಹೇಳಿದರು.

ಕೆಜಿಎಫ್ ಕಾರ್ಯದರ್ಶಿ ಕೆ.ಬಿ.ಕೃಷ್ಣಪ್ಪ, ಬಿ.ಎಂ.ನಾಗರಾಜ್, ಎ.ಕೆ.ವಸಂತೇಗೌಡ, ಎ.ಎನ್.ನಾಗರಾಜು, ಕೆ.ವಿ.ನರೇಂದ್ರ, ಮನೋಹರ್, ಜಗನ್ನಾಥ್, ಬಿ.ಎಸ್.ಜಯರಾಮ್, ಹಳಸೆ ಶಿವಣ್ಣ ಮತ್ತಿತರರಿದ್ದರು.

Ashika S

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

7 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

10 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

41 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

47 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

59 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago