News Karnataka Kannada
Friday, May 03 2024
ಶಿವಮೊಗ್ಗ

ದೇಶದ ಆಸ್ತಿ ಭಸ್ಮ ಮಾಡಲು ನೋಡಿದ್ರೆ, ಕಾಂಗ್ರೆಸ್ ಭಸ್ಮವಾಗಿ ಹೋಗಲಿದೆ: ಕೆ.ಎಸ್.ಈಶ್ವರಪ್ಪ

K'taka police gives clean chit to ex-minister Eshwarappa in contractor's suicide case
Photo Credit : Twitter

ಶಿವಮೊಗ್ಗ: ಅಗ್ನಿಪಥ ಯೋಜನೆ ವಿರೋಧಿಸಿ ದೇಶದ ಆಸ್ತಿ ಭಸ್ಮ ಮಾಡಲು ಯುವಕರಿಗೆ ಪ್ರಚೋದಿಸಿದರೆ ಕಾಂಗ್ರೆಸ್ ಕೂಡ ಸಂಪೂರ್ಣ ಭಸ್ಮವಾಗಿ ಹೋಗಲಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಯಾವುದೇ ವಿರೋಧ ವ್ಯಕ್ತ ಮಾಡಲು ಎಲ್ಲರಿಗೂ ಅವಕಾಶ ಇದೆ. ಆದರೆ ವಿರೋಧಕ್ಕೆ ಅರ್ಥ ಇರಬೇಕು. ಅಗ್ನಿಪಥ ಯೋಜನೆಯಲ್ಲಿ ದೋಷ ಇದ್ದರೆ ಪ್ರತಿಭಟನೆ ಮಾಡಲು ಯಾರದೂ ಅಡ್ಡಿ ಇಲ್ಲ. ಆದರೆ ವಿರೋಧದ ದೇಶದ ಆಸ್ತಿಗೆ ಬೆಂಕಿ ಹಚ್ಚಲಾಗುತ್ತಿದೆ. ಅಧಿಕಾರದ ಲಾಲಸೆಗೆ ಕಾಂಗ್ರೆಸ್ ಯುವಕರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಇದಕ್ಕಾಗಿ ಕಾಂಗ್ರೆಸ್ ದೇಶದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ದೇಶದ ಆಸ್ತಿ ಯಾವುದೇ ಪಕ್ಷ ಅಥವಾ ವ್ಯಕ್ತಿಗೆ ಸೇರಿದ್ದಲ್ಲ. ಹಿಂದೆ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಸೇರಿದಂತೆ ಅನೇಕರು ಶಾಂತಿಯುತವಾಗಿ ಹೋರಾಟ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಈಗ ಅದೇ ಕಾಂಗ್ರೆಸ್ ಪಕ್ಷದಲ್ಲಿ ಗೂಂಡಾಗಳು ಸೇರಿಕೊಂಡಿದ್ದಾರೆ. ದೇಶಕ್ಕೆ ಬೆಂಕಿ ಹಚ್ಚಲು ಪ್ರಚೋದನೆ ನೀಡುತ್ತಿದ್ದಾರೆ. ಇದೇನಾ ಇವರಿಗೆ ದೇಶದ ಬಗ್ಗೆ ಇರುವ ಕಾಳಜಿ ಎಂದು ಪ್ರಶ್ನಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು