ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ಕಾರೊಂದು ನುಗ್ಗಿ ಉಲ್ಟಾ ಬಿದ್ದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕನಲ್ಲಿ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ. ಕಾರು ವೇಗವಾಗಿ ಬಂದು ನಿಯಂತ್ರಣ ತಪ್ಪಿ ಗಾಂಧಿ ಚೌಕ್ದಲ್ಲಿನ ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ಟೈಲ್ಸ್ ಬಟ್ಟೆ ಅಂಗಡಿಗೆ ನುಗ್ಗಿದೆ.
ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಸ್ಕೂಟಿ ಪುಡಿ, ಪುಡಿಯಾಗಿದೆ. ತಡರಾತ್ರಿ ಈ ಘಟನೆ ನಡೆದಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಆಗುಂಬೆ ರಸ್ತೆಯಿಂದ ಛತ್ರಕೇರಿ ಕಡೆಗೆ ತಿರುಗಿಸುವ ವೇಳೆ ಬಟ್ಟೆ ಅಂಗಡಿಗೆ ಕಾರು ನುಗ್ಗಿದೆ. ಇದಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಹೇಳುತ್ತಿದ್ದಾರೆ.