News Karnataka Kannada
Saturday, April 27 2024
ಶಿವಮೊಗ್ಗ

ಹೆಣ್ಣು ಮರಿಗೆ ಜನ್ಮ ನೀಡಿದ ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂದಿದ್ದ ಆನೆ

Netravathi
Photo Credit : News Kannada

ಶಿವಮೊಗ್ಗ: ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂದಿದ್ದ ನೇತ್ರಾವತಿ ಆನೆ ಮರಿ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗದ ಕೋಟೆ ರಸ್ತೆಯ ವಾಸವಿ ಶಾಲೆ ಆವರಣದಲ್ಲಿ ಆನೆ ಹೆಣ್ಣು ಮರಿಗೆ ಜನ್ಮ ನೀಡಿದೆ.

28 ವರ್ಷದ ನೇತ್ರಾವತಿ ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂದಿತ್ತು. ಸಕ್ರೇಬೈಲು ಆನೆ ಬಿಡಾರದಿಂದ ಆಗಮಿಸಿತ್ತು. ಇಂದು ದಸರಾ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿತ್ತು. ಇದೀಗ ನೇತ್ರಾವತಿ ಆನೆ 5ನೇ ಬಾರಿ ಮರಿ ಹಾಕಿದೆ. ಸದ್ಯ ಬಾಣಂತಿ ಆನೆಯ ಆರೈಕೆಯಲ್ಲಿ ಮಾವುತರು, ಕಾವಾಡಿಗರು ತೊಡಗಿದ್ದಾರೆ. ಇನ್ನು ನಿನ್ನೆ ರಾತ್ರಿ ನೇತ್ರಾವತಿ ಆನೆ ಹೆಣ್ಣು ಮರಿಗೆ ಜನ್ಮ ನೀಡಿದ ಬೆನ್ನಲ್ಲೇ ನೇತ್ರಾವತಿ ಮತ್ತು ಮರಿಯನ್ನ ಸಕ್ರೆಬೈಲಿಗೆ ಕಳುಹಿಸಲಾಗಿದೆ.

ಆದರೆ ಜಂಬೂ ಸವಾರಿಯನ್ನ ಹೇಮಾವತಿ ಮತ್ತು ನೇತ್ರಾವತಿಯ ನಡುವೆ ಸಾಗರ ಹೋರಬೇಕಿತ್ತು. ಎರಡು ಹೆಣ್ಣು ಆನೆಗಳ ಮಧ್ಯೆ ಗಂಡಾನೆ ಸರಾಗವಾಗಿ ಬಾರ ಹೋರಲಿದ್ದಾನೆ ಎಂದು ಅಂದಾಜಿಸಲಾಗಿತ್ತು. ಆದರೆ ಒಂದು ಆನೆ ವಾಪಾಸ್ ಸಕ್ರೆಬೈಲಿಗೆ ಹೋಗಿದ್ದರಿಂದ ಈ ತೀರ್ಮಾನ ಅನಿವಾರ್ಯವಾಗಿದೆ.

ಈ ಬೆನ್ನಲ್ಲೇ ಶಾಸಕ ಚೆನ್ನಬಸಪ್ಪ ನವರ ನೇತೃತ್ವದಲ್ಲಿ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಅರಣ್ಯ ಅಧಿಕಾರಿ ಪ್ರಸನ್ನ ಪಟೇಗಾರ್ ನೇತೃತ್ವದಲ್ಲಿ ಸಭೆ ನಡೆಸಿ ಅಲಂಕೃತ ವಾಹನದ ಮೇಲೆ ಚಾಮುಂಡೇಶ್ವರಿಯ ವಿಗ್ರಹವನ್ನ ಇರಿಸಿ ವಾಹನದ ಮುಂಭಾಗದ ಎರಡು ಆನೆಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.

ಮಧ್ಯಾಹ್ನ 2-30ಬರ ಸಮಯದಲ್ಲಿ ಜಂಬೂ ಸವಾರಿಯ ಮೆರವಣಿಗೆ ವಾಸವಿ ಶಾಲೆಯಿಂದ ಹೊರಡಲಿದೆ. ಅಲಂಕೃತ ವಾಹನದ ಮೇಲೆ ಜಂಬೂ ಸವಾರಿ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು