ತೀರ್ಥಹಳ್ಳಿ: ಗಡಿಪಾರು ಆದೇಶದ ಕಾರಣ ಕೇಳಿ ನೋಟೀಸ್ ನೀಡುತ್ತಿದ್ದಂತೆ ರೌಡಿ ಶೀಟರ್ ಕೋಬ್ರಾ ಸುಹೇಲ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಒಂದು ವಾರದ ಹಿಂದೆ ತೀರ್ಥಹಳ್ಳಿ ಪೊಲೀಸರು ರೌಡಿಶೀಟರ್ ಕೋಬ್ರಾ ಸುಹೇಲ್ ನಿಗೆ ಎರಡು ವರ್ಷ ಗಳ ಕಾಲ ಗಡಿಫಾರು ಯಾಕೆ ಮಾಡಬಾರದು ಎಂದು ಕಾರಣಕೇಳಿ ನೋಟೀಸ್ ಜಾರಿ ಮಾಡಿದ್ದರು. ಪೊಲೀಸ್ ನೋಟೀಸ್ ತಲುಪಿ ಎರಡು ದಿನಕ್ಕೆ ಆತ ಆತ್ಮಹತ್ಯೆಗೆ ಯತ್ನಿಸಿ ಈಗ ಮಂಗಳೂರಿನ ಎನಪೋಯ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಇಂದಿರಾ ನಗರ ನಿವಾಸಿ ಹಾಲಿ ಸಿಬಿನಕೆರೆ ಅಬ್ದುಲ್ ಖಾದರ್ ಸಾಬ್ ಪಾರ್ಕ್ ಹತ್ತಿರ ವಾಸವಾಗಿರುವ ಕೋಬ್ರಾ ಅಲಿಯಾಸ್ ಸುಹೇಲ್ ನ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮತ್ತು ಮಳೂರು ಪೊಲೀಸ್ ಠಾಣೆಯಲ್ಲಿ, ಶಿವಮೊಗ್ಗ ಉಪ ವಿಭಾಗ ಅಧಿಕಾರಿಗಳು ಪೊಲೀಸ್ ಇಲಾಖೆಯ ಶಿಫಾರಸ್ಸು ಮೇಲೆ ಎರಡು ವರ್ಷಗಳ ಗಡಿಪಾರನ್ನು ಆದೇಶ ಮಾಡಲು ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿದೆ. ಈ ನೋಟೀಸ್ ಗೆ ಉತ್ತರಿಸದೆ ಸುಹೇಲ್ ಆತ್ಮಹತ್ಯೆ ಮಾಡಿಕೊಳ್ಳುವ ಯತ್ನ ನಡೆಸಿದ್ದಾನೆ.
ವಿಷ ಸೇವನೆ ಮಾಡಿ ಗಂಭೀರ ಸ್ಥಿತಿಯಲ್ಲಿ ತೀರ್ಥಹಳ್ಳಿ ಸರ್ಕಾರಿ ಜೆಸಿ ಆಸ್ಪತ್ರೆಯಿಂದ, ಶಿವಮೊಗ್ಗ ಮೆಗ್ಗಾನ್, ಮೆಗ್ಗಾನ್ ನಿಂದ ಮಂಗಳೂರಿನ ಏನೋಪಾಯ ಆಸ್ಪತ್ರೆಗೆ ಕಳೆದ ಮೂರು ದಿನಗಳ ಹಿಂದೆ ದಾಖಲು ಮಾಡಲಾಗಿದೆ .ಆತನ ಸ್ಥಿತಿಯು ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಈತ ಸಿರ್ಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವಂತಹ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದನು.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು