News Karnataka Kannada
Thursday, May 02 2024
ಶಿವಮೊಗ್ಗ

ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ಹೋಗುತ್ತೇನೆ: ಸಿಎಂ

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ. ಮೈಸೂರು ಅಶೋಕ ರಸ್ತೆಯಲ್ಲಿ ಲಕ್ಷ ದೀಪೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಈಗ ಪೊಲೀಸರು ಕೊನೆ ಕ್ಷಣದಲ್ಲಿ ಅನುಮತಿಯನ್ನು ರದ್ದುಗೊಳಿಸಿದ್ದಾರೆ.
Photo Credit : News Kannada

ಶಿವಮೊಗ್ಗ: ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಈಗಾಗಲೇ ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಇದನ್ನು ಸಿಎಂ ಸಿದ್ದರಾಮಯ್ಯ  ಅವರೂ ಬೆಂಬಲಿಸಿದ್ದು, ರಾಮಮಂದಿರ  ಉದ್ಘಾಟನೆ ಬಳಿಕ ಅಯೋಧ್ಯೆಗೆ  ಭೇಟಿ ನೀಡುತ್ತೇನೆ, ಎಂದು ಸಿದ್ದರಾಮಯ್ಯ  ಹೇಳಿದರು.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾನು ಕೂಡ ಶ್ರೀರಾಮನ ಭಕ್ತ. ಆದರೆ, ಬಿಜೆಪಿಯವರು ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡಲು ಹೋಗುತ್ತಿದ್ದಾರೆ. ಅದರ ವಿರುದ್ಧ ನಮ್ಮ ಹೋರಾಟವೇ ಹೊರತು ಶ್ರೀರಾಮನ ವಿರೋಧ ಮಾಡುತ್ತಿಲ್ಲ. ನಾನು ಕೂಡ ಅಯೋಧ್ಯೆಗೆ ಹೋಗುತ್ತೇನೆ ಎಂದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಂದರೇ ಸುಳ್ಳು, ಸುಳ್ಳು ಅಂದರೇ ಕುಮಾರಸ್ವಾಮಿ. ಹೆಚ್​ಡಿ ಕುಮಾರಸ್ವಾಮಿ ಹೇಳುವುದೆಲ್ಲ ಸುಳ್ಳು. ಹೆಚ್​.ಡಿ.ಕುಮಾರಸ್ವಾಮಿ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ವಾಗ್ದಾಳಿ ಮಾಡಿದರು.

ರಾಮನ ಪ್ರಾಣ ಪ್ರತಿಷ್ಠಾಪನೆ  ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ್​ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್​ ಚೌಧರಿ ಅವರಿಗೆ ಆಹ್ವಾನ ಬಂದಿತ್ತು. ಆದರೆ ಕಾಂಗ್ರೆಸ್​​ ಈ ಕಾರ್ಯಕ್ರಮದಲ್ಲಿ ಭಾಗಿಯಾಗದಿರಲು ನಿರ್ಧರಿಸಿದೆ.

ವರಿಷ್ಠರ ನಿರ್ಧರಕ್ಕೆ ಬೆಂಬಲ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು